ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ: ಹೊಸ ಕಾರ್ಡ್ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು
Updated on

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು. 

ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ. 64 ರಿಂದ ಶೇ. 70 ರಷ್ಟಿದೆ. ಕೇಂದ್ರದಿಂದ ಶೇಕಡಾ 30 ರಿಂದ 36 ರಷ್ಟು ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ  5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ  ಒಂದೂವರೆ ಲಕ್ಷ ಹಣಕಾಸಿನ ನೆರವು ದೊರೆಯಲಿದೆ ಎಂದರು.

ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದುವರೆಗೆ 5 ಕೋಟಿ 54 ಸಾವಿರ ಜನರು ನೋಂದಣಿ ಮಾಡಿದ್ದು, ಅವರೆಲ್ಲರಿಗೂ ಕಾರ್ಡ ವಿತರಣೆ ಜರುಗಲಿದೆ. ತದನಂತರ‌ ನೋಂದಣಿ ಮಾಡಿದವರಿಗೂ‌ ಆರೋಗ್ಯ ‌ಕಾರ್ಡ್ ನೀಡಲಾಗುವುದು.  ಈ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲಿ ಪ್ರಪಥಮವಾಗಿ ಈ ಯೋಜನೆಯನ್ನು ರಾಜ್ಯ‌ ಸರ್ಕಾರ ಜಾರಿಗೊಳಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹಿತ ಯೋಜನೆಯ ಅನುಷ್ಠಾನಕ್ಕೆ ಕೈಜೋಡಿಸಿತು ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com