ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ: ಹೊಸ ಕಾರ್ಡ್ ಲೋಕಾರ್ಪಣೆ

ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು
ಕಾರ್ಯಕ್ರಮದಲ್ಲಿ ಸಿಎಂ ಸಿದ್ದರಾಮಯ್ಯ ಮತ್ತಿತರರು

ಬೆಳಗಾವಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ   ಆಯುಷ್ಮಾನ್ ಭಾರತ್ - ಆರೋಗ್ಯ ಕರ್ನಾಟಕ ಯೋಜನೆಯ ಪರಿಷ್ಕೃತ ಕಾರ್ಡ್ ವಿತರಣೆಗೆ ಚಾಲನೆ ನೀಡಿದರು. 

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ದಿನೇಶ್ ಗುಂಡೂರಾವ್, ಆರೋಗ್ಯ ಇಲಾಖೆ ಪ್ರಧಾನ ಕಾರ್ಯದರ್ಶಿ ಟಿ.ಕೆ. ಅನಿಲ್ ಕುಮಾರ್ ಮತ್ತು ಆಯುಕ್ತ ರಂದೀಪ್ ಮೊದಲಾದವರು ಉಪಸ್ಥಿತರಿದ್ದರು. 

ನಂತರ ಮಾತನಾಡಿದ ಮುಖ್ಯಮಂತ್ರಿ, ಈ ಯೋಜನೆಯಲ್ಲಿ ರಾಜ್ಯ ಸರ್ಕಾರದ ಕೊಡುಗೆ ಶೇ. 64 ರಿಂದ ಶೇ. 70 ರಷ್ಟಿದೆ. ಕೇಂದ್ರದಿಂದ ಶೇಕಡಾ 30 ರಿಂದ 36 ರಷ್ಟು ಫಲಾನುಭವಿಗಳಿಗೆ ಆರ್ಥಿಕ ನೆರವು ದೊರೆಯಲಿದೆ. ಬಿ.ಪಿ.ಎಲ್. ಪಡಿತರ ಚೀಟಿದಾರರಿಗೆ  5 ಲಕ್ಷ ಹಾಗೂ ಎಪಿಎಲ್ ಕಾರ್ಡ್ ಹೊಂದಿದವರಿಗೆ  ಒಂದೂವರೆ ಲಕ್ಷ ಹಣಕಾಸಿನ ನೆರವು ದೊರೆಯಲಿದೆ ಎಂದರು.

ಸಚಿವ ದಿನೇಶ್ ಗುಂಡೂರಾವ್ ಮಾತನಾಡಿ, ಇದುವರೆಗೆ 5 ಕೋಟಿ 54 ಸಾವಿರ ಜನರು ನೋಂದಣಿ ಮಾಡಿದ್ದು, ಅವರೆಲ್ಲರಿಗೂ ಕಾರ್ಡ ವಿತರಣೆ ಜರುಗಲಿದೆ. ತದನಂತರ‌ ನೋಂದಣಿ ಮಾಡಿದವರಿಗೂ‌ ಆರೋಗ್ಯ ‌ಕಾರ್ಡ್ ನೀಡಲಾಗುವುದು.  ಈ ಸಿದ್ಧರಾಮಯ್ಯನವರು ಮುಖ್ಯಮಂತ್ರಿ ಆಗಿದ್ದಾಗ ದೇಶದಲ್ಲಿ ಪ್ರಪಥಮವಾಗಿ ಈ ಯೋಜನೆಯನ್ನು ರಾಜ್ಯ‌ ಸರ್ಕಾರ ಜಾರಿಗೊಳಿಸಿತ್ತು. ನಂತರ ಕೇಂದ್ರ ಸರ್ಕಾರವೂ ಸಹಿತ ಯೋಜನೆಯ ಅನುಷ್ಠಾನಕ್ಕೆ ಕೈಜೋಡಿಸಿತು ಎಂದು ತಿಳಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com