ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತಮಿಳುನಾಡಿಗೆ ನಿತ್ಯ 3,250 ಕ್ಯೂಸೆಕ್ಸ್ ನೀರು ಕಾವೇರಿ ನೀರು ಹರಿವು!

ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಮೈಚಾಂಗ್ ಚಂಡಮಾರುತದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಈಶಾನ್ಯ ಮಾನ್ಸೂನ್ ಜೊತೆಗೆ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಕರ್ನಾಟಕದಿಂದ 3,250-3,300 ಕ್ಯೂಸೆಕ್‌ನಷ್ಟು ಕಾವೇರಿ ನೀರನ್ನು ಹರಿಸಲಾಗುತ್ತಿದೆ.
Published on

ಬೆಂಗಳೂರು: ತಮಿಳುನಾಡಿನಲ್ಲಿ ಕಳೆದ ಕೆಲವು ದಿನಗಳಿಂದ ಮೈಚಾಂಗ್ ಚಂಡಮಾರುತದೊಂದಿಗೆ ಧಾರಾಕಾರ ಮಳೆಯಾಗುತ್ತಿದೆ. ಅಲ್ಲದೇ ಈಶಾನ್ಯ ಮಾನ್ಸೂನ್ ಜೊತೆಗೆ ಬೆಂಗಳೂರು ಮತ್ತು ದಕ್ಷಿಣ ಕರ್ನಾಟಕ ಭಾಗದಲ್ಲಿ ಉತ್ತಮ ಮಳೆಯಿಂದಾಗಿ ಕರ್ನಾಟಕದಿಂದ 3,250-3,300 ಕ್ಯೂಸೆಕ್‌ನಷ್ಟು ಕಾವೇರಿ ನೀರನ್ನು ಹರಿಸಲಾಗುತ್ತಿದೆ. ಕಾವೇರಿ ನೀರು ಬಿಡುವ ಕುರಿತು ತೀವ್ರ ವಿರೋಧ ವ್ಯಕ್ತವಾಗಿದ್ದರೂ ಉತ್ತಮ ಮಳೆಯಿಂದಾಗಿ ತಮಿಳುನಾಡಿಗೆ ನಿತ್ಯ 3,250-3,300 ಕ್ಯೂಸೆಕ್ ನೀರನ್ನು ಹರಿಸಲಾಗುತ್ತಿದೆ ಎಂದು ಮೂಲಗಳು ತಿಳಿಸಿವೆ. 

ಮೂಲಗಳು ಹೇಳುವಂತೆ ಇದನ್ನು ಕಬಿನಿ ಅಥವಾ ಕೆಆರ್‌ಎಸ್ ಅಣೆಕಟ್ಟುಗಳಿಂದ ಹರಿಸಲಾಗುತ್ತಿಲ್ಲ. ಆದರೆ ಕೆಆರ್‌ಎಸ್ ಮತ್ತು ಕಬಿನಿ ನಡುವಿನ ವಲಯದಲ್ಲಿ ಬಿಳಿಗುಂಡ್ಲುವಿಗೆ ಹೆಚ್ಚುವರಿ ನೀರು ಹರಿಯುತ್ತಿದೆ. ಅಕ್ಟೋಬರ್ 1 ರಿಂದ ಇಲ್ಲಿಯವರೆಗೆ ಬೆಂಗಳೂರಿನಲ್ಲಿ ಸುಮಾರು 200 ಮಿ. ಮೀ ಮಳೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮೂಲಗಳು ತಿಳಿಸಿದ್ದು, ಈ ಅವಧಿಯಲ್ಲಿ ಕಾವೇರಿ ಜಲಾನಯನ ಪ್ರದೇಶದಲ್ಲಿ ಈಶಾನ್ಯ ಮಾನ್ಸೂನ್ ಮತ್ತು ಹವಾಮಾನ ವೈಫರೀತ್ಯದಿಂದ ಸಾಕಷ್ಟು ಪ್ರಮಾಣದ ಮಳೆಯಾಗಿದೆ.

ಸೆಪ್ಟೆಂಬರ್-ಅಂತ್ಯದಲ್ಲಿ, ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರವು ಸೆಪ್ಟೆಂಬರ್ 27 ಕ್ಕೆ ಕೊನೆಗೊಂಡ ಹದಿನೈದು ದಿನಗಳಲ್ಲಿ ಸಂಗ್ರಹವಾಗಿರುವ 0.7 ಟಿಎಂಸಿ ಅಡಿ ಕೊರತೆಯನ್ನು ಸರಿದೂಗಿಸಲು ತಮಿಳುನಾಡಿಗೆ ಕಾವೇರಿ ನೀರನ್ನು ಬಿಡುವಂತೆ ಕರ್ನಾಟಕಕ್ಕೆ ತಿಳಿಸಿತು. ನೈಋತ್ಯ ಮುಂಗಾರು ಮಳೆಯ ಕೊರತೆಯಿಂದಾಗಿ ನೀರಿನ ಇಳುವರಿಯಲ್ಲಿ ಕೊರತೆ ಉಂಟಾಗಿರುವುದರಿಂದ ನೀರು ಬಿಡುವುದು ಕಷ್ಟ ಎಂದು ಕರ್ನಾಟಕ ಹೇಳಿತ್ತು. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com