ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಆನೆ ದಾಳಿ: 3 ವರ್ಷದಲ್ಲಿ ಕೊಡಗು ಒಂದರಲ್ಲೇ 18 ಮಂದಿ ಬಲಿ

ಆನೆ ದಾಳಿಗೆ 3 ವರ್ಷಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.
Published on

ಬೆಳಗಾವಿ: ಆನೆ ದಾಳಿಗೆ 3 ವರ್ಷಗಳಲ್ಲಿ ದಕ್ಷಿಣ ಕನ್ನಡ, ಕೊಡಗು, ಚಿಕ್ಕಮಗಳೂರು ಮತ್ತು ಹಾಸನ ಜಿಲ್ಲೆಗಳಲ್ಲಿ 40 ಮಂದಿ ಸಾವನ್ನಪ್ಪಿದ್ದಾರೆಂದು ರಾಜ್ಯ ಸರ್ಕಾರ ಸೋಮವಾರ ಹೇಳಿದೆ.

ಪರಿಷತ್ತಿನಲ್ಲಿ ಬಿಜೆಪಿ ಎಂಎಲ್ಸಿ ಹರೀಶ್ ಕುಮಾರ್ ಅವರ ಪ್ರಶ್ನೆಗೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ಉತ್ತರ ನೀಡಿದರು.

2020 ರಿಂದ ಈವರೆಗೂ ಕೊಡಗು ಒಂದರಲ್ಲೇ ಆನೆ ದಾಳಿಗೆ 18 ಜನರು ಸಾವನ್ನಪ್ಪಿದ್ದಾರೆ. ಹಾಸನದಲ್ಲಿ 14, ಚಿಕ್ಕಮಗಳೂರು 5 ಮತ್ತು ದಕ್ಷಿಣ ಕನ್ನಡದಲ್ಲಿ 3 ಮಂದಿ ಸಾವನ್ನಪ್ಪಿದ್ದಾರೆಂದು ಮಾಹಿತಿ ನೀಡಿದರು.

ಮಾನವ ಮತ್ತು ಪ್ರಾಣಿ ಸಂಘರ್ಷ ತಡೆಗೆ 300 ಕಿಮೀ ಅರಣ್ಯದ ಅಂಚಿನಲ್ಲಿ ರೈಲ್ವೆ ಬ್ಯಾರಿಕೇಡ್‌ಗಳನ್ನು ಅಳವಡಿಸಲಾಗುತ್ತಿದೆ, ಮಾನವ-ಆನೆ ಸಂಘರ್ಷ ವರದಿಯಾಗುವ ಪ್ರದೇಶಗಳಲ್ಲಿ ಜಿಲ್ಲಾ ಆನೆ ಕಾರ್ಯಪಡೆಯನ್ನೂ ಸರ್ಕಾರ ನೇಮಿಸುತ್ತದೆ ಎಂದು ತಿಳಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com