ಭಾರತದಲ್ಲಿ ದುಷ್ಕೃತ್ಯಕ್ಕೆ ಉಗ್ರರ ಸಂಚು ಪ್ರಕರಣ; ಬೆಂಗಳೂರಿನ 6 ಕಡೆ ಎನ್ಐಎ ದಾಳಿ

ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ದೇಶದಲ್ಲಿ ದುಷ್ಕೃತ್ಯ ನಡೆಸಲು ಉಗ್ರರು ಸಂಚು ನಡೆಸಿರುವ ಹಿನ್ನೆಲೆ ಎನ್ಐಎ ತನ್ನ ದಾಳಿಯನ್ನು ಮುಂದುವರೆಸಿದ್ದು, ಇಂದು ಬೆಳಗಿನ ಜಾವ ಬೆಂಗಳೂರಿನ ಒಟ್ಟು 6 ಕಡೆಗಳಲ್ಲಿ ದಾಳಿ ನಡೆಸಿ, ತೀವ್ರ ಪರಿಶೀಲನೆ ನಡೆಯುತ್ತಿದೆ.

ಶಂಕಿತ ತಉಗ್ರ ನಸೀರ್ ನೀಡಿರುವ ಮಾಹಿತಿ ಮೇರೆಗೆ ಎನ್ಐಎ ಈ ದಾಳಿಯನ್ನು ನಡೆಸಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಈ ಹಿಂದೆ ಹೆಬ್ಬಾಳದಲ್ಲಿ ಗ್ರೇನೇಡ್ ದೊರೆತ ಪ್ರಕರಣದ ಬಗ್ಗೆ ಎಫ್‌ಐಆರ್ ದಾಖಲಾಗಿತ್ತು. ಆರ್‌ಟಿ ನಗರದ ಮನೆಯೊಂದರಲ್ಲಿ ಗ್ರೆನೇಡ್ ಹಾಗು ಪಿಸ್ತೂಲ್ ಸಿಕ್ಕಿತ್ತು. ಈ ಪ್ರಕರಣ ಎನ್‌ಐಎಗೆ ವರ್ಗಾವಣೆಯಾಗಿದ್ದು, ತನಿಖಾ ಸಂಸ್ಥೆ ತೀವ್ರವಾಗಿ ತನಿಖೆ ನಡೆಸುತ್ತಿದೆ.

ಬಂಧಿತ ಶಂಕಿತ ಉಗ್ರ ಈ ವಿಚಾರದಲ್ಲಿ ಹಲವು ಮಾಹಿತಿ ನೀಡಿದ್ದು, ಆತನಿಂದ ಪಡೆದ ಮಾಹಿತಿಯಂತೆ ದಾಳಿ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ಬಂಧನವಾಗಿದ್ದ ಐವರು ಶಂಕಿತ ಉಗ್ರರ ಪ್ರಕರಣಕ್ಕೆ ಸಂಬಂಧಿಸಿ ದಾಳಿಗಳು ನಡೆದಿವೆ. ಮುದಾಸಿರ್, ಜಾಹಿದ್, ತಬ್ರೇಜ್ ಮಹಮದ್ ಉಮರ್ ಸೇರಿ 5 ಜನರನ್ನು ಬಂಧಿಸಲಾಗಿತ್ತು.

ಹೆಬ್ಬಾಳ ಠಾಣಾ ವ್ಯಾಪ್ತಿಯ ಸುಲ್ತಾನ್ ಪಾಳ್ಯದಲ್ಲಿ ಮೊದಲು ಸಿಸಿಬಿ ಅಧಿಕಾರಿಗಳು ಜುಲೈ 1ರಂದು ದಾಳಿ ಮಾಡಿದ್ದರು. ಈ ವೇಳೆ 7 ನಾಡ ಪಿಸ್ತೂಲ್, 45 ಜೀವಂತ ಗುಂಡು, ಗ್ರೆನೇಡ್ ಹಾಗೂ ವಾಕಿಟಾಕಿಗಳು ಸಿಕ್ಕಿದ್ದವು. ಈ ಪ್ರಕರಣ ಇತ್ತೀಚೆಗಷ್ಟೇ ಎನ್‌ಐಎಗೆ ವರ್ಗಾವಣೆ ಆಗಿತ್ತು.

ವಿಚಾರಣೆಯ ವೇಳೆ ವಿದೇಶದಿಂದ ಜುನೈದ್ ಎಂಬ ಉಗ್ರ ಆಪರೇಟ್ ಮಾಡುತ್ತಾ ಇದ್ದದ್ದು ಬೆಳಕಿಗೆ ಬಂದಿತ್ತು. ಜೊತೆಗೆ ಸರಣಿ ಬಾಂಬ್ ಬ್ಲಾಸ್ಟ್ ರೂವಾರಿ ನಾಸೀರ್ ಜೈಲಿನಲ್ಲಿ ಈ ಶಂಕಿತರಿಗೆ ಭಯೋತ್ಪಾದಕ ಕೃತ್ಯಗಳ ತರಬೇತಿ ನೀಡಿದ್ದ ಎಂಬುದು ತಿಳಿದುಬಂದಿತ್ತು.

ಈ‌ ಸಂಬಂಧ ತನಿಖೆ ನಡೆಸುತ್ತಿರುವ ಎನ್‌ಐಎ ಇಂದು ನಡೆಸಿರುವ ದಾಳಿಯಲ್ಲಿ ಆರು ಕಡೆ ಮನೆಗಳ ಪರಿಶೀಲನೆ ಮಾಡಿದೆ. ದಾಳಿಯಲ್ಲಿ ಮತ್ತಷ್ಟು ವಿಚಾರಗಳು ಬಯಲಾಗುವ ಸಾಧ್ಯತೆಗಳಿವೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com