ಮಂಗಳೂರು: ಇಲ್ಲಿನ ಲೇಡಿಹಿಲ್ನ ಮಂಗಳಾ ಈಜುಕೊಳದ ನೀರಿನಲ್ಲಿ ಮುಳುಗಿ 30 ವರ್ಷದ ವ್ಯಕ್ತಿಯೊಬ್ಬರು ಸಾವಿಗೀಡಾಗಿರುವ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಮೃತರನ್ನು ಹರಿಯಾಣದ ಗುರುಗ್ರಾಮದ ಅಭಿಷೇಕ್ ಆನಂದ್ (30) ಎಂದು ಗುರುತಿಸಲಾಗಿದ್ದು, ಅವರು ನಗರದಲ್ಲಿ ತಂಗಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.
ಮಂಗಳವಾರ ಸಂಜೆ ಮಂಗಳಾ ಈಜುಕೊಳದಲ್ಲಿ ಈಜುತ್ತಿದ್ದಾಗ ಏಕಾಏಕಿ ನೀರಿನಲ್ಲಿ ಮುಳುಗಿದ್ದಾರೆ. ಕೂಡಲೇ ಜೀವರಕ್ಷಕರು ಅವರನ್ನು ಈಜುಕೊಳದಿಂದ ಮೇಲಕ್ಕೆಳೆದು ಆಸ್ಪತ್ರೆಗೆ ಸಾಗಿಸಿದರೂ, ಅವರ ಜೀವ ಉಳಿಸಲು ಸಾಧ್ಯವಾಗಲಿಲ್ಲ.
ಮೃತರ ಕುಟುಂಬ ಸದಸ್ಯರು ಬುಧವಾರ ಇಲ್ಲಿಗೆ ಆಗಮಿಸುವ ನಿರೀಕ್ಷೆಯಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ ಎಂದು ಮೂಲಗಳು ತಿಳಿಸಿವೆ.
Advertisement