ರಾಮನಗರ: ಬೆಳಗಿನ ಜಾವ ಬೆಳೆಗೆ ನೀರು ಹರಿಸಲು ಹೋಗುತ್ತಿದ್ದ ರೈತನ ಮೇಲೆ ಕಾಡಾನೆಯೊಂದು ದಾಳಿ ಮಾಡಿದ್ದು ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರದಲ್ಲಿ ನಡೆದಿದೆ.
ಹಾರೋಹಳ್ಳಿ ತಾಲೂಕಿನಿ ಹಳ್ಳಿಕೆರೆದೊಡ್ಡಿಯಲ್ಲಿ ಈ ಘಟನೆ ನಡೆದಿದ್ದು ಮೃತ ರೈತನನ್ನು 64 ವರ್ಷದ ತಿಮ್ಮಯ್ಯ ಎಂದು ಗುರುತಿಸಲಾಗಿದೆ.
ಇದನ್ನೂ ಓದಿ: ಮಂಡ್ಯದಲ್ಲಿ ಕಾಡಾನೆ ದಾಳಿಗೆ ಮಹಿಳೆ ಬಲಿ
ರೈತನ ಮೇಲೆ ದಾಳಿ ಮಾಡಿದ ಕಾಡಾನೆ ತಲೆಯ ಮೇಲೆಯೇ ಕಾಲಿನಿಂದ ತುಳಿದ ಪರಿಣಾಮ ತಲೆ ಬುರೆಡೆ ಒಡೆದುಹೋಗಿ ಸ್ಥಳದಲ್ಲೇ ತಿಮ್ಮಯ್ಯ ಸಾವನ್ನಪ್ಪಿದ್ದಾರೆ.
ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಅರಣ್ಯಾಧಿಕಾರಿಗಳು ಭೇಟಿ ನೀಡಿ ತಿಮ್ಮಯ್ಯನವರ ಮೃತದೇಹ ಪರಿಶೀಲಿಸಿದರು. ಈ ವೇಳೆ ಅರಣ್ಯಾಧಿಕಾರಿಗಳ ವಿರುದ್ಧ ಗ್ರಾಮಸ್ಥರು ಆಕ್ರೋಶ ಹೊರಹಾಕಿದ್ದು, ಪದೇ ಪದೇ ಕಾಡಾನೆಗಳು ದಾಳಿ ಮಾಡುತ್ತಿದ್ದು ಆನೆಗಳನ್ನು ಕಾಡಿಗೆ ಓಡಿಸುವಂತೆ ಆಗ್ರಹಿಸಿದರು.
Advertisement