ಹಣ ಉಳಿತಾಯ ಮಾಡಲು ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ- ಯತ್ನಾಳ್ ಕಿಡಿ

ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.
ಸಿಎಂ ಸಿದ್ದರಾಮಯ್ಯ, ಯತ್ನಾಳ್
ಸಿಎಂ ಸಿದ್ದರಾಮಯ್ಯ, ಯತ್ನಾಳ್
Updated on

ಬೆಂಗಳೂರು: ಕೋಲಾರದಲ್ಲಿ ವಿದ್ಯಾರ್ಥಿಗಳಿಂದ ಮಲ ಗುಂಡಿ ಸ್ವಚ್ಛ ಮಾಡಿಸಿದ್ದು ಇನ್ನೂ ಮಾಸದೆ ಇರುವ ಸಂದರ್ಭದಲ್ಲೇ ಬೆಂಗಳೂರಿನ ಆಂಧ್ರ ಹಳ್ಳಿಯಲ್ಲಿ ಇಂತಹುದೇ ಘಟನೆ ವರದಿಯಾಗಿದೆ.

ಯಶವಂತಪುರ ಕ್ಷೇತ್ರದ ಅಂಧ್ರಹಳ್ಳಿ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಶಾಲಾ ಮಕ್ಕಳ ಕೈಯಿಂದಲೇ  ಶಿಕ್ಷಕರು ಶೌಚಾಲಯ ಕ್ಲೀನ್ ಮಾಡಿಸಿದ್ದಾರೆ. ಇದರ ವಿರುದ್ಧ ರಾಜಕೀಯ ನಾಯಕರು ಹಾಗೂ ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.

ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ವರದಿ ಹಂಚಿಕೊಂಡಿರುವ ಬಿಜೆಪಿ ಹಿರಿಯ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ. ಮುಗ್ಧ ಮಕ್ಕಳಿಂದ ಶೌಚಾಲಯ ಸ್ವಚ್ಛ ಮಾಡಿಸಿರುವುದು ನಿಜಕ್ಕೂ ಖಂಡನೀಯ. ಹಣವನ್ನು ಉಳಿತಾಯ ಮಾಡುವುದಕ್ಕೆ ವಿದ್ಯಾರ್ಥಿಗಳನ್ನೇ ಸಂಪನ್ಮೂಲಗಳನ್ನಾಗಿ ಬಳಸುವುದು ತರವಲ್ಲ ಎಂದು ಟೀಕಿಸಿದ್ದಾರೆ. 

ಸ್ವಚ್ಛ ಮಾಡುವ ಕೆಲಸದಿಂದ ಹಿಡಿದು ಬಿಸಿಯೂಟದವರೆಗೂ ಸ್ಪಷ್ಟವಾದ ಪ್ರಮಾಣಿತ ಕಾರ್ಯಾಚರಣಾ ವಿಧಾನ ಇರಬೇಕು.  ಹಾಗೂ ಇದನ್ನು ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕಾದದ್ದು ಶಾಲೆ ಹಾಗೂ ಶಿಕ್ಷಣ ಇಲಾಖೆಯ ಜವಾಬ್ದಾರಿ ಎಂದಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com