ಬೆಂಗಳೂರು: ಹೊರವಲಯದಲ್ಲಿ ಕೆರೆ ಏರಿ ಮೇಲಿಂದ ಉರುಳಿಬಿದ್ದ ಖಾಸಗಿ ಬಸ್, 20 ಮಂದಿ ಗಾಯ

ವೇಗವಾಗಿ ಬಂದ ಖಾಸಗಿ ಬಸ್ ವೊಂದು ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಅಪಘಾತಕ್ಕೀಡಾದ ಬಸ್
ಅಪಘಾತಕ್ಕೀಡಾದ ಬಸ್

ಬೆಂಗಳೂರು: ವೇಗವಾಗಿ ಬಂದ ಖಾಸಗಿ ಬಸ್ ವೊಂದು ಕೆರೆ ಏರಿ ಮೇಲಿಂದ ಉರುಳಿ ಬಿದ್ದ ಪರಿಣಾಮ 20 ಮಂದಿ ಗಾಯಗೊಂಡಿದ್ದು, ಐವರು ಗಂಭೀರವಾಗಿ ಗಾಯಗೊಂಡಿದ್ದಾರೆ.

ನಗರದ ಹೊರವಲಯದ ಸರ್ಜಾಪುರ-ಅತ್ತಿಬೆಲೆ ರಸ್ತೆಯ ಬಿದರಗುಪ್ಪೆ ಕೆರೆ ಬಳಿ ಶನಿವಾರ ಈ ಅಪಘಾತ ನಡೆದಿದೆ. ಬಸ್ ಚಾಲಕ ಸಲೀಂ ಉಲ್ಲಾನನ್ನು ಪೊಲೀಸರು ಬಂಧಿಸಿದ್ದಾರೆ. ಬೆಳಗ್ಗೆ 6 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದಾಗ ಬಸ್‌ನಲ್ಲಿ ಸುಮಾರು 50 ಮಂದಿ ಇದ್ದರು ಎನ್ನಲಾಗಿದೆ. 

ಬಸ್  ಸರ್ಜಾಪುರ-ಅತ್ತಿಬೆಲೆ ಮಾರ್ಗವಾಗಿ ತಮಿಳುನಾಡಿನ ಓಂ ಶಕ್ತಿ ಕಡೆಗೆ ಸಾಗುತ್ತಿತ್ತು. ಗಾಯಾಳುಗಳನ್ನು ಅತ್ತಿಬೆಲೆಯ ಶ್ರೀ ಸಾಯಿ ಆಸ್ಪತ್ರೆಗೆ ರವಾನಿಸಲಾಗಿದೆ. ಅತ್ತಿಬೆಲೆ ನಿವಾಸಿ ಸಲೀಂ ಉಲ್ಲಾ ಅವರ ಅಜಾಗರೂಕತೆಯ ಚಾಲನೆಯೇ ಅಪಘಾತಕ್ಕೆ ಕಾರಣ ಎಂದು ಪೊಲೀಸರು ತಿಳಿಸಿದ್ದಾರೆ.

ಬಸ್ ಕೆರೆಗೆ ಉರುಳಿ ಬಿದ್ದಿದ್ದರೆ ದೊಡ್ಡ ದುರಂತವಾಗುತ್ತಿತ್ತು ಎಂದು ಬಿದರಗುಪ್ಪೆಯ ಕೆಲವು ಪ್ರಯಾಣಿಕರು ಮತ್ತು ನಿವಾಸಿಗಳು  ಪೊಲೀಸರಿಗೆ ಮಾಹಿತಿ ನೀಡಿದರು. ಅತ್ತಿಬೆಲೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com