ಮಂಡ್ಯ: ಮುಸ್ಲಿಂ ಮಹಿಳೆಯರಿಗೆ ಪರ್ಮನೆಂಟ್ ಗಂಡನನ್ನು ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ ಎಂದು ಹಿಂದೂ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಮಾತನಾಡಿರುವ ಅವರು, ನಿಮಗೆ ತಲಾಕ್ ಹೇಳುವ ಅವಕಾಶ ಇತ್ತು. ಪ್ರಧಾನಿ ಮೋದಿಯವರ ಸರ್ಕಾರದಿಂದ ತ್ರಿವಳಿ ತಲಾಕ್ ರದ್ದಾಗಿದೆ ಎಂದು ತಿಳಿಸಿದರು. ತ್ರಿವಳಿ ತಲಾಕ್ ರದ್ದುಪಡಿಸುವ ಮೂಲಕ ಅವರಿಗೆ ಪರ್ಮನೆಂಟ್ ಗಂಡ ಕೊಟ್ಟಿದ್ದು ಪ್ರಧಾನಿ ನರೇಂದ್ರ ಮೋದಿ ಸರ್ಕಾರವ ಎಂದು ಆರ್ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ಹೇಳಿದ್ದಾರೆ.
ನಿಮ್ಮಲ್ಲಿ ಯುವತಿ ಯುವಕರು ಇಲ್ಲವೇ. ನಮ್ಮನ್ನ ಯಾಕೆ ಟಾರ್ಗೆಟ್ ಮಾಡುತ್ತಿರಾ? ಮೋದಿ ಸರ್ಕಾರ ಬಂದ ಮೇಲೆ ತಲಾಖ್ ಬಂತು. ಅವರಿಗೆ ದಿನಕ್ಕೆ ಒಬ್ಬ ಗಂಡ. ಅವರಿಗೆ ಪರ್ಮೆನೆಂಟ್ ಗಂಡ ಇರಲಿಲ್ಲ. ಪರ್ಮೆನೆಂಟ್ ಗಂಡನನ್ನ ಕೊಟ್ಟಿದ್ದು ಮೋದಿ ಸರ್ಕಾರ ಎಂದರು.
ದೇಶದಲ್ಲಿ ನಾವು ಹಿಂದೂಗಳು ಉಳಿಯುವುದು ಹೇಗೆ? ಹಿಂದೂಗಳು ಕಡಿಮೆ ಆದರೇ ಪಾಕಿಸ್ತಾನ ಜಿಂದಾಬಾದ್ ಅನ್ನುತ್ತಾರೆ. ನಮ್ಮ ಕೋರ್ಟ್ ವ್ಯವಸ್ಥೆ ಹೇಗಿದೆ? ಕಸಾಬ್ ಗಾಗಿ ರಾತ್ರಿ ಕೋರ್ಟ್ ತೆರೆಯಿತು. ದೇವರ ಧಯೆ ಅವನಿಗೆ ಶಿಕ್ಷೆ ಆಯಿತು. ಅವನಿಗೂ ಬೆಂಬಲ ವ್ಯಕ್ತಪಡಿಸಿದ್ರು. ಆದರೂ ನಾವು ಸುಮ್ಮನೇ ಇರಬೇಕಾ ಎಂದು ಪ್ರಶ್ನಿಸಿದರು.
ಬಹು ಪತ್ನಿತ್ವ ಪಿಡುಗು ಹಾಗೂ ತಲಾಕ್ ಕಾಟದಿಂದಾಗಿ ಈ ಹಿಂದೆ ಮುಸಲ್ಮಾನ ಹೆಣ್ಣು ಮಕ್ಳಳಿಗೆ ಶಾಶ್ವತ ಪತಿ ಇರಲಿಲ್ಲ. ದಿ ಕೇಳರ ಸ್ಟೋರಿ, ಕಾಶ್ಮೀರ ಫೈಲ್ಸ್ ಸಿನೆಮಾ ನೋಡಿ. ಮತಾಂತರ, ಹಿಂದೂಗಳ ಮೇಲಿನ ದೌರ್ಜನ್ಯ ತೋರಿಸಿದ್ದಾರೆ. ಮುಸ್ಲಿಂ ಹುಡುಗರಲ್ಲ, ಯುವತಿಯರು ಮೋಸ ಮಾಡುತ್ತಿದ್ದಾರೆ. ದಿ ಕೇರಳ ಸ್ಟೋರಿ ಮೂವಿಯಲ್ಲಿ ಈ ಬಗ್ಗೆ ತೋರಿಸಿದ್ದಾರೆ. ಮತಾಂತರ ಮಾಡಲು ಲವ್ ಜಿಹಾದ್ ಪ್ರಯತ್ನಗಳಾಗುತ್ತಿವೆ ಎಂದು ಗುಡುಗಿದರು.
ಅಂಬೇಡ್ಕರ್ ದೇಶ ವಿಭಜನೆ ಮಾಡಬೇಡಿ ಅಂದಿದ್ದರು. ದೇಶವನ್ನ ಉಳಿಸಿಕೊಳ್ಳುವ ಮಹತ್ ಕಾರ್ಯ ಹಿಂದೂಗಳಿಂದ ಮಾತ್ರ ಸಾಧ್ಯ. ಮುಸ್ಲಿಂಮರಿಗೆ ಹಲವು ದೇಶಗಳು ಇವೆ. ಆದರೆ, ಹಿಂದೂಗಳಿಗೆ ಭಾರತ ಮಾತ್ರ ಇರೋದು. ಹಿಂದೂಗಳಿಗೆ ಬೇರೆ ಕಡೆ ಜಾಗ ಇಲ್ಲ. ಅದಕ್ಕಾಗಿ ನಾವು ಹೋರಾಟ ಮಾಡಬೇಕು ಎಂದು ಕಿಡಿ ಕಾರಿದ್ದಾರೆ.
Advertisement