ಕಾಡಾನೆ ದಾಳಿಗೆ ವ್ಯಕ್ತಿ ಸಾವು: ಚಿರತೆ ಸೆರೆಗೆ ಅರಣ್ಯ ಇಲಾಖೆ ಆಪರೇಷನ್!

ನಗರದ ಹೊರವಲಯದಲ್ಲಿ ಮತ್ತೆ ಕಾಡುಮೃಗಗಳ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರೆ, ಇತ್ತ ಜನರ ಆತಂಕಕ್ಕೆ ಕಾರಣವಾಗಿರುವ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.
ಕಾಡಾನೆ ದಾಳಿ-ಚಿರತೆ ಸೆರೆಗೆ ಪಂಜರ
ಕಾಡಾನೆ ದಾಳಿ-ಚಿರತೆ ಸೆರೆಗೆ ಪಂಜರ
Updated on

ಬೆಂಗಳೂರು: ನಗರದ ಹೊರವಲಯದಲ್ಲಿ ಮತ್ತೆ ಕಾಡುಮೃಗಗಳ ದಾಳಿ ಮುಂದುವರೆದಿದ್ದು, ಆನೆ ದಾಳಿಗೆ ವ್ಯಕ್ತಿ ಮೃತಪಟ್ಟಿದ್ದರೆ, ಇತ್ತ ಜನರ ಆತಂಕಕ್ಕೆ ಕಾರಣವಾಗಿರುವ ಚಿರತೆ ಸೆರೆಗೆ ಅರಣ್ಯ ಇಲಾಖೆ ಹರಸಾಹಸ ಪಡುತ್ತಿದೆ.

ಬನ್ನೇರುಘಟ್ಟ ರಾಷ್ಟ್ರೀಯ ಉದ್ಯಾನವನದ ಕೋಡಿಹಳ್ಳಿ ವ್ಯಾಪ್ತಿಯಲ್ಲಿ ಕಾಡಾನೆಯೊಂದು ಎಂದು ವ್ಯಕ್ತಿಯೊಬ್ಬನನ್ನು ಕೊಂದು ಹಾಕಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಬುಧವಾರ ಬೆಳಿಗ್ಗೆ ಶವ ಪತ್ತೆಯಾಗಿದ್ದು, ಆದರೆ ಆತನನ್ನು ಎರಡು ದಿನಗಳ ಹಿಂದೆಯೇ ಆತ ಸಾವನ್ನಪ್ಪಿರುವ ಸಾಧ್ಯತೆ ಇದೆ ಎಂದು ಹೇಳಲಾಗಿದೆ.

ಪ್ರಾಥಮಿಕ ಹಂತದ ಮೇಲ್ನೋಟಕ್ಕೆ ಆನೆ ದಾಳಿ ಮಾಡಿದಂತಿದೆ, ಆದರೆ ಮರಣೋತ್ತರ ಪರೀಕ್ಷೆಯ ವರದಿ ಬರಬೇಕಿದೆ. ಅರಣ್ಯ ಪ್ರದೇಶದ ಗಡಿಯಲ್ಲಿ ಈ ಘಟನೆ ನಡೆದಿದ್ದು, ಆನೆ ದಾಳಿಯಿಂದ ಸಾವಿಗೀಡಾಗಿದ್ದರೆ ಮೃತನ ಕುಟುಂಬ ಪರಿಹಾರ ನೀಡಲಾಗುತ್ತದೆ ಎಂದು ಅಧಿಕಾರಿ ಹೇಳಿದರು.

ಮೃತರನ್ನು ಬನ್ನಿ ಮುಕೋಡ್ಲು ನಿವಾಸಿ ರಾಮಚಂದ್ರಯ್ಯ (50) ಎಂದು ಗುರುತಿಸಲಾಗಿದ್ದು, ಘಟನೆ ನಡೆದಾಗ ಆತ ತನ್ನ ಜಾನುವಾರುಗಳನ್ನು ಮೇಯಿಸಲು ಕರೆದುಕೊಂಡು ಹೋಗಿದ್ದ ಎನ್ನಲಾಗಿದೆ.

ಚಿರತೆ ಸೆರೆಗೆ ಪಂಜರ ಇಟ್ಟ ಅರಣ್ಯ ಇಲಾಖೆ
ಮತ್ತೊಂದು ಘಟನೆಯಲ್ಲಿ ಹೊಸಕೂರಿನ ಗಟ್ಟಹಳ್ಳಿಯಲ್ಲಿ ಪ್ರತ್ಯಕ್ಷವಾದ ಚಿರತೆಗಾಗಿ ಅರಣ್ಯ ಇಲಾಖೆ ಅಧಿಕಾರಿಗಳು ತೀವ್ರ ನಿಗಾ ವಹಿಸಿದ್ದಾರೆ. ಎರಡು ದಿನಗಳ ಹಿಂದೆ ಅಲೆದಾಡುತ್ತಿದ್ದ ಚಿರತೆ ಕಾಣಿಸಿಕೊಂಡಿತ್ತು ಎಂದು ಸ್ಥಳೀಯರು ಹೇಳಿದ್ದಾರೆ. ಮರಿಗಳ ಗುರುತುಗಳು ಪತ್ತೆಯಾಗಿವೆ. ಅರಣ್ಯ ಪ್ರದೇಶಗಳಿಗೆ ಸಮೀಪವಿರುವ ಪ್ರದೇಶವಾದ್ದರಿಂದ ಚಿರತೆ ಮತ್ತೆ ಕಾಡಿಗೆ ಅಲೆದಾಡುವ ಸಾಧ್ಯತೆ ಇದೆ. ಆದರೆ ಅದರ ಸೆರೆಗೆ ಬೋನ್ ಅನ್ನು ಇಡಲಾಗಿದೆ. ಮುನ್ನೆಚ್ಚರಿಕೆ ಕ್ರಮವಾಗಿ ಸ್ಥಳದಲ್ಲಿದ್ದು, ಶೋಧ ನಡೆಸಲಾಗುತ್ತಿದೆ ಎಂದು ಅರಣ್ಯಾಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com