ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯಲ್ಲಿ JN.1 ಸೋಂಕು ದೃಢ

ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಬೆಂಗಳೂರು: ನಗರದ ಜಯದೇವ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವ್ಯಕ್ತಿಯೊಬ್ಬರಲ್ಲಿ ಕೋವಿಡ್ ರೂಪಾಂತರಿ ವೈರಸ್ ಜೆಎನ್.1 ಸೋಂಕು ಪತ್ತೆಯಾಗಿದ್ದು, ಈ ಬೆಳವಣಿಗೆ ಮಹಾಮಾರಿ ವೈರಸ್ ಜನರಲ್ಲಿನ ಆತಂಕವನ್ನು ಮತ್ತಷ್ಟು ಹೆಚ್ಚಾಗುವಂತೆ ಮಾಡಿದೆ.

ಈ ನಡುವೆ ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಕೊರೋನಾ ಸೋಂಕಿನ ಪರೀಕ್ಷೆಯನ್ನು ಹೆಚ್ಚಿಸಲಾಗುತ್ತಿದ್ದು, ಗುರುವಾರ ಒಂದೇ ದಿನ 2,492 ಮಂದಿಗೆ ಪರೀಕ್ಷೆ ನಡೆಸಲಾಗಿದೆ. ಈ ಪೈಕಿ 85 ಮಂದಿಯಲ್ಲಿ ಸೋಂಕು ಇರುವುದು ದೃಢಪಟ್ಟಿದೆ. ರಾಜ್ಯದಲ್ಲಿ ಒಟ್ಟಾರೆ 158 ಮಂದಿಯಲ್ಲಿ ಸೋಂಕು ಇರುವುದು ದೃಢುಪಟ್ಟಿದೆ.

ಗುರುವಾರ 51 ಮಂದಿ ಸೋಂಕಿನಿಂದ ಗುಣಮುಖರಾಗಿದ್ದು, ಮೃತಪಟ್ಟ ಕುರಿತು ವರದಿಯಾಗಿಲ್ಲ. ನಗರದಲ್ಲಿ ಒಟ್ಟು 414 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆಯ ವರದಿಯಲ್ಲಿ ತಿಳಿಸಿದೆ.

ಕಳೆದ ಮೂರು ದಿನಗಳಲ್ಲಿ ನಗರದಲ್ಲಿ ಪ್ರತಿ ದಿನ ಎರಡು ಸಾವಿರಕ್ಕೂ ಅಧಿಕ ಮಂದಿಗೆ ಪರೀಕ್ಷೆ ನಡೆಸಲಾಗುತ್ತಿದೆ, ಮಂಗಳವಾರ 2,014, ಬುಧವಾರ 2,321 ಹಾಗೂ ಗುರುವಾರ 2,492 ಮಂದಿಯನ್ನು ಪರೀಕ್ಷೆಗೊಳಪಡಿಸಲಾಗಿದೆ.  

ಇನ್ನು ಜಯದೇವ ಆಸ್ಪತ್ರೆಯಲ್ಲಿ ಜೆಎನ್ 1 ಸೋಂಕು ಕುರಿತು ಮಾತನಾಡಿರುವ  ಜಯದೇವ ನಿರ್ದೇಶಕ ಡಾ ಸಿಎನ್ ಮಂಜುನಾಥ್ ಅವರು, ರಾಜ್ಯದಲ್ಲಿ ಪರೀಕ್ಷೆಗಳ ಸಂಖ್ಯೆಯನ್ನು ಹೆಚ್ಚಿಸಿರುವ ಹಿನ್ನೆಲೆಯಲ್ಲಿ ಸೋಂಕಿತರ ಸಂಖ್ಯೆಯಲ್ಲೂ ಹೆಚ್ಚಳಗಳು ಕಂಡು ಬರಬಹುದು. ಈ ಪೈಕಿ ಜೆಎನ್.1 ಸೋಂಕಿತರು ಪತ್ತೆಯಾದರೆ ಇದರಲ್ಲಿ ಆತಂಕ ಪಡುವುದು ಏನೂ ಇಲ್ಲ. ಪ್ರಸ್ತುತ ಸೋಂಕಿಗೊಳಗಾಗಿರುವ ವ್ಯಕ್ತಿ ಹೃದಯ ಶಸ್ತ್ರಚಿಕಿತ್ಸೆಗೆಂದು ಆಸ್ಪತ್ರೆಗೆ ಬಂದಿದ್ದು, ನಿಯಮಾನುಸಾರ ಶಸ್ತ್ರಚಿಕಿತ್ಸೆಗೂ ಮುನ್ನ ಪರೀಕ್ಷೆಗೊಳಪಡಿಸಲಾಗಿತ್ತು. ಈ ವೇಳೆ ಜೆಎನ್.1 ಸೋಂಕು ಇರುವುದು ದೃಢಪಟ್ಟಿದೆ ಎಂದು ಹೇಳಿದ್ದಾರೆ.

ಸೋಂಕು ಪತ್ತೆಯಾಗಿರುವುದರ ಕುರಿತು ಜನರು ಆತಂಕಕ್ಕೊಳಗಾಗಬಾರದು. ಜನರು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಬೇಕು ಎಂದು ಹೇಳಿದ್ದಾರೆ.

ಜೆಎನ್ 1 ಸೋಂಕಿತನ್ನು ನಿರ್ವಹಿಸಲು ನಿಯಮಗಳನ್ನು ಅನುಸರಿಸಲಾಗುತ್ತದೆ. ಹೀಗಾಗಿ ಆಂತಕ ಪಡುವ ಅಗತ್ಯವಿಲ್ಲ ಎಂದು ಆರೋಗ್ಯಆಯುಕ್ತ ರಂದೀಪ್ ಅವರು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com