ಕೊಡಗಿನಲ್ಲಿ ಮತ್ತೆ ಜಾನುವಾರುಗಳ ಮೇಲೆ ಹುಲಿ ದಾಳಿ; ನಿವಾಸಿಗಳಲ್ಲಿ ಆತಂಕ

ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮಡಿಕೇರಿ: ದಕ್ಷಿಣ ಕೊಡಗಿನಲ್ಲಿ ಹುಲಿಗಳ ಹಾವಳಿ ಮುಂದುವರಿದಿದ್ದು, ಜಿಲ್ಲೆಯಾದ್ಯಂತ ಹಲವು ಜಾನುವಾರುಗಳು ದಾಳಿಗೆ ಬಲಿಯಾಗುತ್ತಿರುವುದು ನಿವಾಸಿಗಳನ್ನು ಆತಂಕಕ್ಕೀಡು ಮಾಡಿದೆ. 

ಪೊನ್ನಂಪೇಟೆ ತಾಲೂಕಿನ ಸಮೀಪದ ಗ್ರಾಮಗಳಲ್ಲಿ ಎರಡು ದಿನಗಳ ಅಂತರದಲ್ಲಿ ಎರಡು ಹಸುಗಳು ಬಲಿಯಾಗಿದ್ದು, ಹುಲಿಯನ್ನು ಹಿಡಿಯುವಂತೆ ಗ್ರಾಮಸ್ಥರು ಈ ಹಿಂದೆ ಅಧಿಕಾರಿಗಳಿಗೆ ಒತ್ತಾಯಿಸಿದ್ದರು.

ಶುಕ್ರವಾರ ಬೆಳಗ್ಗೆ ಪೊನ್ನಂಪೇಟೆ ತಾಲೂಕಿನ ಮಾಯಮುಡಿ ಪಂಚಾಯಿತಿ ವ್ಯಾಪ್ತಿಯ ರುದ್ರಗುಪ್ಪೆಯಲ್ಲಿ ಹಸುವೊಂದರ ಮೇಲೆ ಹುಲಿ ದಾಳಿ ನಡೆಸಿದ್ದು, ಹಸು ಬಲಿಯಾಗಿದೆ. ಈ ಸ್ಥಳದಿಂದ ಕೇವಲ 20 ಕಿ.ಮೀ ದೂರದಲ್ಲಿ, ಹಿಂದಿನ ದಿನ ಹುಲಿಯೊಂದು ಹಳ್ಳಿಯೊಂದರಲ್ಲಿ ಹಸುವನ್ನು ಬಲಿ ತೆಗೆದುಕೊಂಡಿತ್ತು. ಎರಡೂ ಹಸುಗಳನ್ನು ಒಂದೇ ಹುಲಿ ಕೊಂದಿದೆಯೇ ಎಂಬುದು ಇನ್ನೂ ಪತ್ತೆಯಾಗಿಲ್ಲ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com