ರಾಜಕೀಯ ಕಾರಣಗಳಿಗಾಗಿ ಗಡಿ ವಿವಾದಗಳ ಜೀವಂತವಾಗಿರಿಸಲಾಗಿದೆ: ಸಚಿವ ಜೆ.ಸಿ ಮಾಧುಸ್ವಾಮಿ

ಚುನಾವಣೆ ಹಾಗೂ ರಾಜಕೀಯ ಕಾರಣಗಳಿಗಾಗಿ ಅಂತರ್ ರಾಜ್ಯ ಗಡಿ ಸಮಸ್ಯೆಗಳನ್ನು ಜೀವಂತವಾಗಿರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಶನಿವಾರ ಹೇಳಿದ್ದಾರೆ.
ಮಾಧುಸ್ವಾಮಿ
ಮಾಧುಸ್ವಾಮಿ
Updated on

ಮೈಸೂರು: ಚುನಾವಣೆ ಹಾಗೂ ರಾಜಕೀಯ ಕಾರಣಗಳಿಗಾಗಿ ಅಂತರ್ ರಾಜ್ಯ ಗಡಿ ಸಮಸ್ಯೆಗಳನ್ನು ಜೀವಂತವಾಗಿರಿಸಲಾಗಿದೆ ಎಂದು ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿಯವರು ಶನಿವಾರ ಹೇಳಿದ್ದಾರೆ.

ಇಲ್ಲಿನ ವಿದ್ಯಾ ವಿಕಾಸ್ ಇನ್‌ಸ್ಟಿಟ್ಯೂಟ್ ಆಫ್ ಲೀಗಲ್ ಸ್ಟಡೀಸ್‌ನಲ್ಲಿ ‘ಅಂತರ ರಾಜ್ಯ ಗಡಿ ಮತ್ತು ಜಲ ವಿವಾದಗಳನ್ನು ನಿಯಂತ್ರಿಸುವ ಕಾನೂನು’ ವಿಚಾರ ಸಂಕಿರಣದಲ್ಲಿ ಸಚಿವರು ಮಾತನಾಡಿದರು.

ರಾಜಕೀಯ ಕಾರಣಗಳಿಗಾಗಿ ಗಡಿ ಸಮಸ್ಯೆಗಳನ್ನು ಜೀವಂತವಾಗಿ ಇರಿಸಲಾಗಿದೆ. ಆದರೆ, ಕರ್ನಾಟಕ ಸರ್ಕಾರವು 1956 ರ ರಾಜ್ಯ ಕಾಯಿದೆಯ ಮರುಸಂಘಟನೆಗೆ ಬದ್ಧವಾಗಿರುತ್ತದೆ ಮತ್ತು ನೆರೆಯ ರಾಜ್ಯಗಳ ಯಾವುದೇ ಒತ್ತಡಕ್ಕೆ ಒಳಪಡುವುದಿಲ್ಲ ಎಂದು ಸ್ಪಷ್ಟಪಡಿಸಿದರು.

ಕರ್ನಾಟಕದಲ್ಲಿ ಕೊಂಕಣಿ ಭಾಷಿಕ ಜನಸಂಖ್ಯೆಗೆ ಮಹಾರಾಷ್ಟ್ರ ಹಕ್ಕು ನೀಡಲು ಸಾಧ್ಯವಿಲ್ಲ. ಚುನಾವಣೆ ಹತ್ತಿರ ಬಂದಾಗ ನೆರೆಯ ರಾಜ್ಯವು ಗಡಿ ಸಮಸ್ಯೆಗೆ ಕಿಡಿ ಹೊತ್ತಿಸುತ್ತದೆ ಎಂದು ಆರೋಪಿಸಿದರು.

ಇದೇ ವೇಳೆ ಬರಪೀಡಿತ ಕೋಲಾರ ಜಿಲ್ಲೆಯ ಕೆರೆಗಳನ್ನು ತುಂಬಿಸಲು ಬೆಂಗಳೂರಿನಿಂದ ಸಂಸ್ಕರಿಸಿದ ಕೊಳಚೆ ನೀರನ್ನು ಬಳಸುವುದನ್ನು ವಿರೋಧಿಸಿ ತಮಿಳುನಾಡು ಸರ್ಕಾರ ಸುಪ್ರೀಂ ಕೋರ್ಟ್‌ಗೆ ಮೊರೆ ಹೋಗಿರುವುದಕ್ಕೆ ಮಾಧುಸ್ವಾಮಿ ಅವರು ವಾಗ್ದಾಳಿ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Open in App

Advertisement

X
Kannada Prabha
www.kannadaprabha.com