ಬೆಂಗಳೂರಿನ ಬೌರಿಂಗ್ ಆಸ್ಪತ್ರೆಯಲ್ಲಿ ವಿದ್ಯುತ್ ಕಡಿತ: ಅಧಿಕಾರಿಗಳಿಗೆ ಉಪ ಲೋಕಾಯುಕ್ತ ನೋಟಿಸ್

ಬೌರಿಂಗ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾನುವಾರ ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಧ್ಯಮ ವರದಿ ನಂತರ ಲೋಕಾಯುಕ್ತ ನೋಟಿಸ್ ನೀಡಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಕಳೆದ ಎರಡು ದಿನಗಳಿಂದ ವಿದ್ಯುತ್ ಪೂರೈಕೆಯಿಲ್ಲದೆ ಆಸ್ಪತ್ರೆಯು ಕತ್ತಲೆಕೋಣೆಯಂತಾಗಿದ್ದು, ರೋಗಿಗಳಿಗೆ ಮತ್ತು ಅವರ ಪರಿಚಾರಕರಿಗೆ ಉಂಟಾದ ಅನಾನುಕೂಲತೆಗಾಗಿ ಬೌರಿಂಗ್, ಲೇಡಿ ಕರ್ಜನ್ ಆಸ್ಪತ್ರೆಯ ಅಧಿಕಾರಿಗಳ ವಿರುದ್ಧ ಉಪ ಲೋಕಾಯುಕ್ತ ನ್ಯಾಯಮೂರ್ತಿ ಕೆ.ಎನ್.ಫಣೀಂದ್ರ ಅವರು ಸ್ವಯಂಪ್ರೇರಿತ ಕ್ರಮಕೈಗೊಂಡಿದ್ದಾರೆ.

ಬೌರಿಂಗ್ ಆಸ್ಪತ್ರೆಗೆ ವಿದ್ಯುತ್ ಪೂರೈಕೆ ಇಲ್ಲದ ಕಾರಣ ಭಾನುವಾರ ಮಹಿಳೆ ಮತ್ತು ಆಕೆಯ ನವಜಾತ ಶಿಶುವನ್ನು ವಾಣಿ ವಿಲಾಸ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ ಎಂಬ ಮಾಧ್ಯಮ ವರದಿ ನಂತರ ಲೋಕಾಯುಕ್ತ ನೋಟಿಸ್ ನೀಡಿದೆ.

ಪರಿಣಾಮಕಾರಿ ಮತ್ತು ಗುಣಮಟ್ಟದ ಆರೋಗ್ಯ ಸೇವೆ ನೀಡುವಲ್ಲಿ ಕರ್ತವ್ಯ ಲೋಪ ಎಸಗಿರುವುದನ್ನು ನ್ಯಾಯಮೂರ್ತಿ ಫಣೀಂದ್ರ ಗಮನಿಸಿದ್ದಾರೆ.  ಸಂವಿಧಾನದ 21 ನೇ ಪರಿಚ್ಛೇದದ ಅಡಿಯಲ್ಲಿ ಖಾತರಿಪಡಿಸಿದ ಬದುಕುವ ಮತ್ತು ಸ್ವಾತಂತ್ರ್ಯದ ಹಕ್ಕನ್ನು ನಿರಾಕರಿಸುವಲ್ಲಿ ಕಾರಣವಾಗುತ್ತದೆ ಎಂದು ಹೇಳಿದೆ.

ಪತ್ರಿಕೆಯ ವರದಿಯನ್ನು ಆಧರಿಸಿ ವಿಚಾರಣೆಯನ್ನು ಆರಂಭಿಸಿದ ನ್ಯಾಯಮೂರ್ತಿ ಫಣೀಂದ್ರ ಅವರು ವೈದ್ಯಕೀಯ ಅಧೀಕ್ಷಕರು, ಮುಖ್ಯ ವೈದ್ಯಾಧಿಕಾರಿ ಮತ್ತು ರೆಸಿಡೆಂಟ್ ಮೆಡಿಕಲ್ ಆಫೀಸರ್‌ಗೆ ನೋಟಿಸ್ ಜಾರಿ ಮಾಡುವಂತೆ ನಿರ್ದೇಶನ ನೀಡಿದರು ಮತ್ತು ಫೆಬ್ರವರಿ 21ರ ಒಳಗೆ ವಿವರಣೆಯನ್ನು ಕೇಳಿದ್ದಾರೆ.

ರೋಗಿಗಳ ಅನುಕೂಲಕ್ಕಾಗಿ ವಿದ್ಯುತ್ ಪೂರೈಕೆಯನ್ನು ಪುನಃಸ್ಥಾಪಿಸಲು ಮತ್ತು ಅಂತಹ ಸಂದರ್ಭಗಳು ಮರುಕಳಿಸದಂತೆ ನೋಡಿಕೊಳ್ಳಲು ತಕ್ಷಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಅವರು ಅವರಿಗೆ ಸೂಚಿಸಿದರು.

ಉಪ ಲೋಕಾಯುಕ್ತರು ಈಗ ಶ್ರೀ ಅಟಲ್ ಬಿಹಾರಿ ವಾಜಪೇಯಿ ವೈದ್ಯಕೀಯ ಕಾಲೇಜು ಮತ್ತು ಸಂಶೋಧನಾ ಸಂಸ್ಥೆ ಆಸ್ಪತ್ರೆಯ ನಿರ್ದೇಶಕರಿಗೆ, ಕುಂದುಕೊರತೆಗಳನ್ನು ನಿವಾರಿಸಲು ತೆಗೆದುಕೊಂಡ ಕ್ರಮಗಳು, ವಿದ್ಯುತ್ ಸರಬರಾಜು ಮರುಸ್ಥಾಪನೆ ವಿಳಂಬಕ್ಕೆ ಕಾರಣರಾದ ಅಧಿಕಾರಿಗಳ ಹೆಸರುಗಳು ಮತ್ತು ಹುದ್ದೆಗಳ ಕುರಿತು ವರದಿಯನ್ನು ಸಲ್ಲಿಸಲು ಸೂಚಿಸಿದ್ದಾರೆ.

ಆಸ್ಪತ್ರೆ ಪರಿಶೀಲನೆ ನಡೆಸಿ ಮಧ್ಯಂತರ ವರದಿ ಸಲ್ಲಿಸುವಂತೆ ಲೋಕಾಯುಕ್ತ ಡಿವೈಎಸ್ಪಿಗೆ ಸೂಚಿಸಿದ ಉಪ ಲೋಕಾಯುಕ್ತರು, ಅಗತ್ಯ ಕ್ರಮಕ್ಕಾಗಿ ವೈದ್ಯಕೀಯ ಶಿಕ್ಷಣ ಸಚಿವರು, ವೈದ್ಯಕೀಯ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮತ್ತು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳ ಆಯುಕ್ತರಿಗೆ ಆದೇಶವನ್ನು ತಿಳಿಸುವಂತೆ ಅಧಿಕಾರಿಗೆ ಸೂಚಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com