ರಾಯಚೂರು: ಪತ್ನಿಯ ನಡತೆ ಮೇಲೆ ಶಂಕೆ, ಮಕ್ಕಳಿಬ್ಬರ ಕತ್ತು ಹಿಸುಕಿ ಕೊಂದು ಕ್ರೂರಿ ತಂದೆ!

ಪತ್ನಿಯ ನಡತೆ ಬಗ್ಗೆ ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 
ಮಕ್ಕಳಿಬ್ಬರನ್ನು ಕೊಂದ ಆರೋಪಿ ನಿಂಗಪ್ಪ
ಮಕ್ಕಳಿಬ್ಬರನ್ನು ಕೊಂದ ಆರೋಪಿ ನಿಂಗಪ್ಪ
Updated on

ರಾಯಚೂರು: ಪತ್ನಿಯ ನಡತೆ ಬಗ್ಗೆ ಅನುಮಾನದ ಕಣ್ಣುಗಳಿಂದ ನೋಡುತ್ತಿದ್ದ ವ್ಯಕ್ತಿಯೋರ್ವ ತನ್ನಿಬ್ಬರು ಮಕ್ಕಳ ಕತ್ತು ಹಿಸುಕಿ ಕೊಂದಿರುವ ದಾರುಣ ಘಟನೆ ರಾಯಚೂರಿನಲ್ಲಿ ನಡೆದಿದೆ. 

ದೇವದುರ್ಗದ ಜಕ್ಲೇರದೊಡ್ಡಿಯಲ್ಲಿ ಈ ದಾರುಣ ಘಟನೆ ನಡೆದಿದ್ದು ಹತ್ಯೆಗೀಡಾದ ಮಕ್ಕಳನ್ನು 5 ವರ್ಷದ ಶಿವರಾಜ್ ಮತ್ತು 3 ವರ್ಷದ ರಾಘವೇಂದ್ರ ಎಂದು ಗುರುತಿಸಲಾಗಿದೆ. 

ಪತ್ನಿಯೊಂದಿಗೆ ಜಗಳವಾಡಿದ್ದ ಪತಿ ನಿಂಗಪ್ಪ ಎಂಬಾತ ಅತ್ತೆಯ ಮನೆಯಲ್ಲಿದ್ದ ಮಕ್ಕಳನ್ನು ಕರೆತಂದು ಕತ್ತು ಹಿಸುಕಿ ಕೊಂದಿದ್ದಾನೆ. ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ ಎಂದು ಆರೋಪಿಸಿ ನಿಂಗಪ್ಪ ದಿನ ನಿತ್ಯ ಜಗಳವಾಡುತ್ತಿದ್ದ ಇದರಿಂದ ಬೇಸತ್ತ ಮಹಿಳೆ ಗಂಡನಿಂದ ದೂರವಾಗಿದ್ದಳು. ಕೊಲೆ ಪ್ರಕರಣ ಸಂಬಂಧ ಆರೋಪಿ ನಿಂಗಪ್ಪನನ್ನು ಪೊಲೀಸರು ಬಂಧಿಸಿದ್ದಾರೆ.

ದೇವದುರ್ಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಹಿರಿಯ ಪೊಲೀಸ್ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com