ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ: ಇಬ್ಬರ ಬಂಧನ

ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 
ಸತೀಶ್ ರೆಡ್ಡಿ
ಸತೀಶ್ ರೆಡ್ಡಿ
Updated on

ಬೆಂಗಳೂರು: ಬೊಮ್ಮನಹಳ್ಳಿ ಬಿಜೆಪಿ ಶಾಸಕ ಸತೀಶ್ ರೆಡ್ಡಿ ಹತ್ಯೆಗೆ ಸುಪಾರಿ ನೀಡಿರುವ ಆರೋಪದ ಮೇಲೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ. 

ಸತೀಶ್ ರೆಡ್ಡಿ ಹತ್ಯೆಗೆ ಕುಖ್ಯಾತ ರೌಡಿ ಗ್ಯಾಂಗ್ ಸ್ಕೆಚ್ ಹಾಕಿದ್ದ ಸ್ಫೋಟಕ ವಿಷಯ ಬಹಿರಂಗಗೊಂಡಿದೆ. ನಗರದ ವಿಲ್ಸನ್ ಗಾರ್ಡನ್ ನಾಗನ ತಂಡ ಶಾಸಕನ ಹತ್ಯೆಗೆ 2 ಕೋಟಿಗೆ ಸುಪಾರಿ ಪಡೆದಿದ್ದು ಶಾಸಕರ ಚಲನವಲನಗಳ ಬಗ್ಗೆ ನಿಗಾವಹಿಸಿದ್ದರು. ಆದರೆ ದಾಳಿಗೂ ಮುಂಚೆ ರೌಡಿಶೀಟರ್ ನಾಗನ ತಂಡದಿಂದಲೇ ವಿಷಯ ಬಹಿರಂಗಗೊಂಡಿದೆ. 

ನಾಗನ ತಂಡದಲ್ಲಿದ್ದ ಚಿತ್ರದುರ್ಗದ ಮೂಲದ ಆಕಾಶ್ ಕೊಲೆಯ ಸುಳಿವು ಬಿಟ್ಟು ಕೊಟ್ಟಿದ್ದಾನೆ. ಸತೀಶ್ ರೆಡ್ಡಿ ಬೆಂಬಲಿಗ ಚಂದ್ರು ಕರೆ ಮಾಡಿದ್ದಾಗ ಆಕಾಶ್ ಕೊಲೆಯ ಸಂಚು ಬಾಯ್ಬಿಟ್ಟಿದ್ದಾನೆ. ನಂತರ ಎಚ್ಚೆತ್ತ ಶಾಸಕರು ಪೊಲೀಸರಿಗೆ ದೂರು ನೀಡಿದ್ದಾರೆ. 

ತಮ್ಮ ವಿರುದ್ಧ ದೂರು ದಾಖಲಾಗುತ್ತಿದ್ದಂತೆ ರೌಡಿ ನಾಗನ ತಂಡ ತಲೆಮರೆಸಿಕೊಂಡಿದ್ದಾರೆ. ಇನ್ನು ನಾಗನ ತಂಡವನ್ನು ಪತ್ತೆ ಹಚ್ಚಲು ವಿಶೇಷಗಳನ್ನು ತಂಡಗಳನ್ನು ರಚಿಸಿದೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com