ಪ್ರತಿ ಟನ್ ಕಬ್ಬಿಗೆ ರೂ. 3,500 ಪಾವತಿಗೆ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯಪಾಲರಿಗೆ ರೈತ ಸಂಘ ಒತ್ತಾಯ

ಪ್ರತಿ ಟನ್ ಕಬ್ಬಿಗೆ ರೂ.3,500 ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ರೈತ ಸಂಘ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ.
ಬಡಗಲಪುರ ನಾಗೇಂದ್ರ
ಬಡಗಲಪುರ ನಾಗೇಂದ್ರ
Updated on

ಮೈಸೂರು: ಪ್ರತಿ ಟನ್ ಕಬ್ಬಿಗೆ ರೂ.3,500 ಪಾವತಿಸುವಂತೆ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ರಾಜ್ಯ ರೈತ ಸಂಘ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರನ್ನು ಒತ್ತಾಯಿಸಿದೆ.

ರಾಜ್ಯ ರೈತ ಸಂಘದ  ಅಧ್ಯಕ್ಷ ಬಡಗಲಪುರ ನಾಗೇಂದ್ರ ನೇತೃತ್ವದ ನಿಯೋಗ ರಾಜ್ಯಪಾಲರನ್ನು ಭೇಟಿ ಮಾಡಿದ್ದು,105 ದಿನಗಳಿಂದ ಪ್ರತಿಭಟನೆ ನಡೆಸಿದ ರೈತರ ಬೇಡಿಕೆಯನ್ನು ಸರ್ಕಾರ ಈಡೇರಿಸದ ಹಿನ್ನೆಲೆಯಲ್ಲಿ ಮಧ್ಯಸ್ಥಿಕೆ ವಹಿಸುವಂತೆ ಮನವಿ ಮಾಡಿದೆ.

ಎಥೆನಾಲ್ ಉತ್ಪಾದಿಸುವ ಸಕ್ಕರೆ ಕೈಗಾರಿಕೆಗಳಿಂದ ಪುಡಿಮಾಡಿದ ಪ್ರತಿ ಟನ್ ಕಬ್ಬಿಗೆ ಸರ್ಕಾರ ಈಗಾಗಲೇ ರೂ. 50  ಹೆಚ್ಚಿಸುವುದಾಗಿ ಘೋಷಿಸಿದ್ದು, ಕೇಂದ್ರ ಸರ್ಕಾರ ನಿಗದಿಪಡಿಸಿರುವ ರೂ. 3,050 ಎಫ್ ಆರ್ ಪಿಗಿಂತ ರೂ. 100 ಹೆಚ್ಚು ಪಾವತಿಸಲು ಎಲ್ಲಾ ಸಕ್ಕರೆ ಕಾರ್ಖಾನೆಗಳಿಗೆ ನಿರ್ದೇಶಿಸಿದೆ. ಆದರೆ, ಆದೇಶ ಇನ್ನೂ ಜಾರಿಯಾಗಿಲ್ಲ ಎಂದು ಅವರು ತಿಳಿಸಿದ್ದಾರೆ.

ತೆಲಂಗಾಣ ಕಬ್ಬು ಬೆಳೆಗಾರರಿಗೆ ಪ್ರತಿ ಟನ್‌ಗೆ ರೂ.  3,200, ತಮಿಳುನಾಡಿನಲ್ಲಿ ರೂ. 3,500, ಹರಿಯಾಣದಲ್ಲಿ ರೂ. 3,800 ಮತ್ತು ಉತ್ತರ ಪ್ರದೇಶದಲ್ಲಿ ರೂ. 4,400 ಪಾವತಿಸಲಾಗುತ್ತಿದೆ ಎಂದು ನಾಗೇಂದ್ರ ಹೇಳಿದ್ದಾರೆ. 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com