ಸಿ.ಟಿ.ರವಿ ವಿರುದ್ಧ ಬಾಡೂಟ ಸವಿದು ದೇವಾಲಯ ಪ್ರವೇಶ ಆರೋಪ; ಎಲ್ಲೆಡೆ ವ್ಯಾಪಕ ಚರ್ಚೆ

ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.
ಸಿಟಿ ರವಿ ಫೋಟೋ ವೈರಲ್
ಸಿಟಿ ರವಿ ಫೋಟೋ ವೈರಲ್
Updated on

ಕಾರವಾರ: ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ, ಶಾಸಕ ಸಿ.ಟಿ ರವಿ ಮಾಂಸ ತಿಂದು ನಾಗಬನ ಮತ್ತು ಹನುಮ ದೇಗುಲಕ್ಕೆ ಭೇಟಿ ನೀಡಿದ್ರಾ ಅನ್ನೋ ಪ್ರಶ್ನೆ  ಹರಿದಾಡುತ್ತಿದೆ.

ಫೆಬ್ರವರಿ 19 ರಂದು ಭಾನುವಾರ ಉತ್ತರ ಕನ್ನಡ  ಜಿಲ್ಲೆಗೆ ಸಿ.ಟಿ.ರವಿ ಆಗಮಿಸಿದ್ದರು. ಕಾರವಾರದ ಶಿವಾಜಿ ಜಯಂತಿಯಲ್ಲಿ ಭಾಗವಹಿಸಿ ಭಟ್ಕಳಕ್ಕೆ ಸಿ.ಟಿ.ರವಿ ಆಗಮಿಸಿದ್ದರು. ಭಟ್ಕಳದ ಶಿರಾಲಿಯಲ್ಲಿರುವ ಶಾಸಕ ಸುನಿಲ್ ನಾಯ್ಕ್  ಮನೆಯಲ್ಲಿ ಸಿ.ಟಿ.ರವಿ ಬಾಡೂಟ ಸವಿದಿದ್ದರು. ಬಾಡೂಟ ಸವಿದಿರುವ ಫೋಟೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಬಾಡೂಟ ಸವಿದು ಭಟ್ಕಳ ನಗರದ ಹಳೇ ಬಸ್ ನಿಲ್ದಾಣ ಸಮೀಪ ಇರುವ ನಾಗಬನ ಹಾಗೂ ಕರಿಬಂಟ ಹನುಮ ದೇವಸ್ಥಾನಕ್ಕೆ ಸಿ.ಟಿ.ರವಿ ಭೇಟಿ ನೀಡಿದ್ದರು. ಭಟ್ಕಳ ಶಾಸಕ ಸುನಿಲ್ ನಾಯ್ಕ್ ಹಾಗೂ ದೇವಸ್ಥಾನದ ಕಮಿಟಿ ಸದಸ್ಯರೊಂದಿಗೆ ಸಿ.ಟಿ.ರವಿ ದೇವಸ್ಥಾನಕ್ಕೆ ತೆರಳಿದ್ದರು.

ನಾಗಬನದ ಬಾಗಿಲು ಹಾಕಿದ್ದರಿಂದ ಗೇಟ್ ಮುಂಭಾಗದಲ್ಲಿ ದೇವರಿಗೆ ಸಿ.ಟಿ.ರವಿ ನಮಸ್ಕಾರ ಸಲ್ಲಿಸಿದ್ದರು. ನಂತರ ಗೇಟ್ ಮುಂಭಾಗದಲ್ಲಿಯೇ ಶಾಸಕ ಸುನಿಲ್ ನಾಯ್ಕ ಹಾಗೂ ಕಮಿಟಿ ಸದಸ್ಯರು ಸಿ.ಟಿ.ರವಿ ಅವರನ್ನು ಸನ್ಮಾನಿಸಿದ್ದರು.

ಈ ಹಿಂದೆ ಮಾಂಸ ಸೇವನೆ ಮಾಡಿ ದೇವಾಲಯದೊಳಗೆ ಪ್ರವೇಶ ಮಾಡಿದ್ದ ಮಾಜಿ ಸಿಎಂ ಸಿದ್ದರಾಮಯ್ಯ ಅವರು ಭಾರಿ ವಿರೋಧವನ್ನು ಎದುರಿಸಿದ್ದರು. ಈಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಶಾಸಕರೊಬ್ಬರ ಮನೆಯಲ್ಲಿ ಭರ್ಜರಿ ಬಾಡೂಟವನ್ನು ಸವಿದು ದೇವಾಲಯ ಪ್ರವೇಶ ಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿದೆ.

ಹಿಂದೂ ಧರ್ಮದ ಬಗ್ಗೆ ಮಾತನಾಡುವ ರವಿ ಅವರು ಧರ್ಮದ ಆಚಾರ, ವಿಚಾರಗಳು ಹಾಗೂ ಸಂಪ್ರದಾಯವನ್ನು ಉಲ್ಲಂಘನೆ ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಈಗ ಉತ್ತರಕನ್ನಡ ಜಿಲ್ಲೆಯಾದ್ಯಂತ ಸಿ.ಟಿ. ರವಿ ಅವರ ಬಾಡೂಟ ಹಾಗೂ ದೇವಾಲಯ ಪ್ರವೇಶದ ಬಗ್ಗೆಯೇ ಚರ್ಚೆಯಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com