ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿ ಪ್ರಧಾನಿ ಮೋದಿ: ಶಿವಮೊಗ್ಗದಲ್ಲಿ ಬಿ.ಎಸ್.ಯಡಿಯೂರಪ್ಪ ಭಾವುಕ ಭಾಷಣ

ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.
ಬಿ.ಎಸ್.ಯಡಿಯೂರಪ್ಪ
ಬಿ.ಎಸ್.ಯಡಿಯೂರಪ್ಪ

ಶಿವಮೊಗ್ಗ: ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ. ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಸೋಮವಾರ ಹೇಳಿದ್ದಾರೆ.

ಶಿವಮೊಗ್ಗದಲ್ಲಿ ನೂತನ ಏರ್​ಪೋರ್ಟ್​ ಉದ್ಘಾಟನಾ ಸಮಾರಂಭ ಸಮಾವೇಶದಲ್ಲಿ ಯಡಿಯೂರಪ್ಪ ಅವರು ತಮ್ಮ ಭಾಷಣದ ವೇಳೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಕೊಂಡಾಡಿದರು.

ಇಂದು ನೂತನ ವಿಮಾನ ನಿಲ್ದಾಣ ಉದ್ಘಾಟಿಸಿದ ಪ್ರಧಾನಮಂತ್ರಿಗಳು ದೇಶವೇ ಮೆಚ್ಚಿದ ಆದರ್ಶ ವ್ಯಕ್ತಿಯಾಗಿದ್ದಾರೆ. ಇಂದು ನನ್ನ ಪಾಲಿನ ಸಾರ್ಥಕತೆಯ ದಿನವಾಗಿದೆ ಎಂದು ಹೇಳಿದರು.

ಕೊಟ್ಟ ಮಾತಿನಂತೆ ಏರ್​ಪೋರ್ಟ್​ ನಿರ್ಮಾಣ ಮಾಡಿ ಉದ್ಘಾಟನೆ ಮಾಡಿದ್ದಾರೆ. ಈ ದಿನ ಬಹಳ ವೈಶಿಷ್ಟ್ಯಪೂರ್ಣವಾದದ್ದು ಮಲೆನಾಡು ಭಾಗದ ಜನರ ಕನಸು ನನಸಾಗುತ್ತಿರುವ ಶುಭ ಸಂಕೇತ. ಮೋದಿ ಆಶೀರ್ವಾದದಿಂದ ನಾಡಿನ ಜನರ ಸೇವೆ ಮಾಡಲು ಅವಕಾಶ ಸಿಕ್ಕಿದೆ. ಇಂತಹ ಅವಕಾಶ ನನಗೆ ಸಿಕ್ಕಿದ್ದಕ್ಕೆ ಜನರಿಗೆ ನಾನು ಋಣಿಯಾಗಿದ್ದೇನೆ.

ಸರ್ವರಿಗೂ ಸಮಬಾಳು, ಸರ್ವರಿಗೂ ಸಮಪಾಲು ಮಾತಿನಂತೆ ಕೆಲಸ ಮಾಡಿದ್ದೇನೆ. ಸಾಮಾಜಿಕ ನ್ಯಾಯವನ್ನು ಎಲ್ಲರಿಗೂ ಒದಗಿಸಿಕೊಟ್ಟಿದ್ದೇನೆ. ಮೋದಿ ನೇತೃತ್ವದಲ್ಲಿ ಡಬಲ್​ ಇಂಜಿನ್ ಸರ್ಕಾರದಿಂದ ಸಾಕಷ್ಟು ಅಭಿವೃದ್ಧಿಯಾಗಿದೆ ಎಂದರು.

ಇದೇ ವೇಳೆ ತಾವು ರಾಜ್ಯದಲ್ಲಿ ಬಿಜೆಪಿ ಕಟ್ಟಿದ ದಿನಗಳನ್ನು, ಬಿಜೆಪಿ ಆಡಳಿತವನ್ನು ಯಡಿಯೂರಪ್ಪ ಅವರು ಸ್ಮರಿಸಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com