ಸಿದ್ದೇಶ್ವರ ಸ್ವಾಮೀಜಿ ಜೊತೆಗಿರುವ ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ
ಸಿದ್ದೇಶ್ವರ ಸ್ವಾಮೀಜಿ ಜೊತೆಗಿರುವ ಸಿಎಂ ಬೊಮ್ಮಾಯಿ ಅವರ ಸಾಂದರ್ಭಿಕ ಚಿತ್ರ

ಸಿದ್ದೇಶ್ವರ ಶ್ರೀಗಳ ಅಂತ್ಯಕ್ರಿಯೆ ವೇಳೆ ಭಕ್ತರು ಶಾಂತಿ, ಸಂಯಮದಿಂದ ಸಹಕರಿಸಿ: ಸಿಎಂ ಬೊಮ್ಮಾಯಿ ಮನವಿ

ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.
Published on

ಬೆಂಗಳೂರು: ನಿನ್ನೆ ನಿಧನರಾದ ಜ್ಞಾನ ಯೋಗಾಶ್ರಮದ ಸಿದ್ದೇಶ್ವರ ಶ್ರಿಗಳ  ಅಂತ್ಯಕ್ರಿಯೆಗೆ ಎಲ್ಲಾ ಭಕ್ತರು ಶಾಂತಿ, ಸಂಯಮ ಹಾಗೂ ಶಿಸ್ತಿನಿಂದ ದರ್ಶನ ಪಡೆದು ಸಹಕರಿಸುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮನವಿ ಮಾಡಿದ್ದಾರೆ.

ತಮ್ಮ ನಿವಾಸದ ಬಳಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿ, ಶ್ರೀಗಳ ಅಂತಿಮ ದರ್ಶನಕ್ಕಾಗಿ ವಿಜಯಪುರ ಜಿಲ್ಲಾಡಳಿತ, ಮುಖಂಡರಾದ ಎಂ. ಬಿ. ಪಾಟೀಲ್, ಬಸನಗೌಡರು, ಎಲ್ಲಾ ಜನಪ್ರತಿನಿಧಿಗಳು ಅಚ್ಚುಕಟ್ಟಾದ ವ್ಯವಸ್ಥೆ ಕಲ್ಪಿಸಿದ್ದಾರೆ ಎಂದರು.

 ವಿಜಯಪುರದ ಜನ ದೊಡ್ಡ ಪ್ರಮಾಣದಲ್ಲಿ ಸಹಕಾರ ನೀಡುತ್ತಿದ್ದಾರೆ. ಸಿದ್ದೇಶ್ವರ ಗುರುಗಳು ಎಷ್ಟು ಪ್ರೀತಿ, ವಿಶ್ವಾಸ ಹಾಗೂ ಸಂಸ್ಕೃತಿಯನ್ನೇ ಬಿಟ್ಟು ಹೋಗಿದ್ದಾರೆ ಎನ್ನುವುದು ಅಲ್ಲಿನ ಜನತೆ ನಡೆದುಕೊಂಡ ರೀತಿಯನ್ನು ನೋಡಿದಾಗ ನಿಜವಾಗಿಯೂ ಸಿದ್ದೇಶ್ವರರ ಮಾತಿನಂತೆ  ನಡೆದುಕೊಳ್ಳುವ ಜನ ಎಂದೆನಿಸುತ್ತದೆ ಎಂದಿದ್ದಾರೆ.

ಸಹಾಯ, ಸಹಕಾರ, ಊಟ, ತಿಂಡಿ, ನೀರು ನೀಡುತ್ತಿದ್ದಾರೆ. ಇದಕ್ಕಾಗಿ ವಿಜಯಪುರದ ಸಮಸ್ತೆ ಜನತೆಗೆ ಧನ್ಯವಾದಗಳು ಎಂದು ಮುಖ್ಯಮಂತ್ರಿ ತಿಳಿಸಿದರು.
 

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com