ಹಾಸನ: ಮೀನು ಹಿಡಿಯಲು ತೆರಳುತ್ತಿದ್ದವರ ಮೇಲೆ ಅಪರಿಚಿತರಿಂದ ಗುಂಡಿನ ದಾಳಿ; ಸಂಘ ಪರಿವಾರದ ಕಾರ್ಯಕರ್ತ ಬಲಿ

ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಹಾಸನ: ತಡರಾತ್ರಿ ಹೇಮಾವತಿ ನದಿಯಲ್ಲಿ ಮೀನು ಹಿಡಿಯಲು ತೆರಳಿದ್ದಾಗ ಅಪರಿಚಿತರು ಗುಂಡಿನ ದಾಳಿ ಮಾಡಿದ್ದರಿಂದ ಸ್ಥಳದಲ್ಲೇ ಓರ್ವ ಸಾವನ್ನಪ್ಪಿದ್ದು ಇಬ್ಬರಿಗೆ ಗಂಭೀರವಾದ ಗಾಯಗಳಾಗಿವೆ.

ಸೋಮವಾರ ಸಂಜೆ ಅಪರಿಚಿತರಿಂದ ನಡೆದ ಗುಂಡಿನ ದಾಳಿಯಲ್ಲಿ ಯುವಕ ನವೀನ್(39) ಸ್ಥಳದಲ್ಲೇ ಸಾವನ್ನಪ್ಪಿದ್ದು ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಾಸನ‌ ಜಿಲ್ಲೆ ಸಕಲೇಶಪುರ  ತಾಲೂಕಿನ ತಂಬಲಗೇರಿ  ಗ್ರಾಮದ ಹೊರವಲಯದಲ್ಲಿ ಗುಂಡಿನ ದಾಳಿ ನಡೆದಿದೆ.

ನವೀನ್ ಸೇರಿದಂತೆ ನಾಲ್ವರು ಮೀನು ಹಿಡಿಯಲು ತೆರಳಿದ್ದ ವೇಳೆ ಅಪರಿಚಿತರಿಂದ ಗುಂಡಿನ ದಾಳಿ ನಡೆದಿದೆ. ನವೀನ್ ಜೊತೆಯಲ್ಲಿ ಅವರ ಗೆಳೆಯರಾದ ದಯಾನಂದ್​, ಪದ್ಮನಾಭ್, ರಾಜಾಚಾರಿ ಇದ್ದರು. ಈ ದಾಳಿಯಲ್ಲಿ ದಯಾನಂದ್ ಮತ್ತು ಪದ್ಮಾನಾಭ್​ ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹಾಸನದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com