ಪಂಚಮಸಾಲಿ, ಒಕ್ಕಲಿಗರಿಗೆ ಮೀಸಲಾತಿ ಖಚಿತ: ಸಿಎಂ ಬೊಮ್ಮಾಯಿ ಭರವಸೆ

ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ
ಸಿಎಂ ಬಸವರಾಜ ಬೊಮ್ಮಾಯಿ
Updated on

ಹುಬ್ಬಳ್ಳಿ: ಪಂಚಮಸಾಲಿ ಹಾಗೂ ಒಕ್ಕಲಿಗರಿಗೆ ಮೀಸಲಾತಿ ವಿಚಾರದಲ್ಲಿ ಯಾವುದೇ ಅನುಮಾನವಿಲ್ಲ ಎಂಬುದನ್ನು ಖಚಿತಪಡಿಸುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂತರಾಜ್ ಕಮಿಟಿಯನ್ನು  4-5 ವರ್ಷಗಳ ಹಿಂದೆ ರಚಿಸಲಾಗಿತ್ತು.  ಆರ್ಥಿಕವಾಗಿ ಹಿಂದುಳಿದ ವರ್ಗಗಳಿಂದ ಬಂದವರನ್ನು ಕೋಟಾದ ಅಡಿಯಲ್ಲಿ ಸೇರಿಸಬೇಕೆಂದು ಹಿಂದುಳಿದ ವರ್ಗಗಳ ಸಮಿತಿ ವರದಿಯಲ್ಲಿ ಹೇಳಿದೆ. ಪಂಚಮಸಾಲಿ, ಒಕ್ಕಲಿಗರಿಗೆ ಒಂದು ವಾರದೊಳಗೆ ಮೀಸಲಾತಿ ಒದಗಿಸುವ ಕೆಲಸ ಮಾಡಲಾಗುವುದು ಎಂದರು.

ಮೀಸಲಾತಿ ವಿವಾದದ ಲಾಭ ಪಡೆಯಲು ಕಾಂಗ್ರೆಸ್ ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದ ಅವರು, ಬಿಜೆಪಿ ಸರ್ಕಾರ ರೈತರು, ಬಡವರು, ಪರಿಶಿಷ್ಟ, ಪರಿಶಿಷ್ಟ ಪಂಗಡ, ಹಿಂದುಳಿದ ವರ್ಗಗಳ ಅಭಿವೃದ್ಧಿಗೆ ಗಮನ ನೀಡಿದೆ. ಪತನದ ಅಂಚಿನಲ್ಲಿರುವ ಕಾಂಗ್ರೆಸ್  ಕಾಂಗ್ರೆಸ್ ಉಚಿತ ಘೋಷಣೆ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುತ್ತಿದೆ ಎಂದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com