ನಿತಿನ್ ಗಡ್ಕರಿಗೆ ಬೆದರಿಕೆ ಕರೆ: ಹಿಂಡಲಗಾ ಜೈಲಿನಲ್ಲಿ ಪತ್ತೆಯಾಗಿಲ್ಲ ಫೋನ್; ಎಷ್ಟೇ ಶೋಧಿಸಿದ್ರು ಸಿಕ್ತಿಲ್ಲ ಸುಳಿವು!

ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.
ನಿತಿನ್ ಗಡ್ಕರಿ
ನಿತಿನ್ ಗಡ್ಕರಿ
Updated on

ಬೆಳಗಾವಿ: ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರ ನಾಗ್ಪುರದ ಕಚೇರಿಗೆ ಬೆದರಿಕೆ ಕರೆ ಮಾಡಿದ್ದ ಕೈದಿ ಜಯೇಶ್‌ ಪೂಜಾರಿ ಕೈಗೆ ಮೊಬೈಲ್‌ ಫೋನ್ ಕೊಟ್ಟಿದ್ದು ಯಾರು? ಜೈಲಿನೊಳಗೆ ಮೊಬೈಲ್‌ ಫೋನ್ ಹೋಗಿದ್ದು ಹೇಗೆ? ಎಂಬ ಬಗ್ಗೆ ಅಧಿಕಾರಿಗಳಿಗೆ ಇನ್ನೂ ಸುಳಿವು ಸಿಕ್ಕಿಲ್ಲ.

ಜನವರಿ 14 ರಂದು ಮಹಾರಾಷ್ಟ್ರ ಪೊಲೀಸ್ ತಂಡ ಹಿಂಡಲಗಾ ಜೈಲಿಗೆ ಭೇಟಿ ನೀಡಿದ್ದು, ಮರುದಿನ ಮತ್ತೊಂದು ತಂಡ ತೆರಳಿದೆ ಎಂದು ಬಲ್ಲ ಮೂಲಗಳು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್‌ಗೆ ತಿಳಿಸಿವೆ. “ಅವರು ಜೈಲಿನ ಆವರಣವನ್ನು ಹುಡುಕಿದರು ಆದರೆ ಫೋನ್ ಪತ್ತೆ ಮಾಡಲು ಸಾಧ್ಯವಾಗಲಿಲ್ಲ.

ಹಿಂಡಲಗಾ ಜೈಲಿನಲ್ಲಿ ಇದ್ದುಕೊಂಡೇ ಶನಿವಾರ ಕರೆ ಮಾಡಿದ್ದ ಕೈದಿ, ತಾನು ಭೂಗತಪಾತಕಿ ದಾವೂದ್‌ ಇಬ್ರಾಹಿಂ ತಂಡದ ಸದಸ್ಯ, 100 ಕೋಟಿ ರು. ನೀಡುವಂತೆ ಬೆದರಿಕೆ ಒಡ್ಡಿದ್ದ. ಪೊಲೀಸ್ ತಂಡಗಳು ಜೀವಾವಧಿ ಅಪರಾಧಿ ಜಯೇಶ್ ಪೂಜಾರಿಯನ್ನು ವಿಚಾರಣೆ ನಡೆಸಿದ್ದಾರೆ. ಆದರೆ ಪೂಜಾರಿ ತಾನು ಬೆದರಿಕೆ ಕರೆ ಮಾಡಿರುವುದನ್ನು ನಿರಾಕರಿಸಿದ್ದಾನೆ ಎಂದು ವರದಿಯಾಗಿದೆ. ಆದರೆ ಅದನ್ನು ಮಾಡಿದ್ದು ಅವರೇ ಎಂದು ಖಚಿತಪಡಿಸುವ ಲಿಂಕ್‌ಗಳಿವೆ ಎಂದು ಮೂಲಗಳು ತಿಳಿಸಿವೆ.

ಏಪ್ರಿಲ್ 2018 ರಲ್ಲಿ ಬೆಳಗಾವಿ ಉತ್ತರ ರೇಂಜ್ ಪೊಲೀಸ್ ಮಹಾನಿರೀಕ್ಷಕರಾಗಿ ನಿಯೋಜನೆಗೊಂಡಿದ್ದಕಾನೂನು ಮತ್ತು ಸುವ್ಯವಸ್ಥೆ  ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ ಅಲೋಕ್ ಕುಮಾರ್ ಅವರಿಗೆ ಬೆದರಿಕೆ ಕರೆಯ ಎಸ್ಎಂಎಸ್ ಕಳುಹಿಸಿದ್ದ. ಪೂಜಾರಿ ತನ್ನ ಸಂದೇಶದಲ್ಲಿ "ನಕ್ಸಲೈಟ್, ಆರ್ಡಿಎಕ್ಸ್, ಎಕೆ 56, ಗ್ರೆನೇಡ್ ತಜ್ಞ ಎಂದು ಹೇಳಿಕೊಂಡಿದ್ದ.

2008ರಲ್ಲಿ ಮಂಗಳೂರಿನಲ್ಲಿ ನಡೆದ ಜೋಡಿ ಕೊಲೆ ಪ್ರಕರಣದಲ್ಲಿ ಪೂಜಾರಿ ಅಪರಾಧಿ. ಅವನು ತನ್ನ ಸೋದರಸಂಬಂಧಿಯ ಹೆಂಡತಿ ಮತ್ತು ಅವರ ಮಗುವನ್ನು ಕೊಂದು ತಲೆಮರೆಸಿಕೊಂಡಿದ್ದನು. 2012ರಲ್ಲಿ ಕೇರಳದಲ್ಲಿ ಪ್ರತ್ಯೇಕ ಪ್ರಕರಣದಲ್ಲಿ ಬಂಧಿಸಲಾಗಿತ್ತು. 2016 ರಲ್ಲಿ ಜೈಲಿನಿಂದ ತಪ್ಪಿಸಿಕೊಂಡಿದ್ದ, ನಂತರ ಬಂಧಿಸಲಾಯಿತು. ಭದ್ರತೆಯ ದೃಷ್ಟಿಯಿಂದ ಹಿಂಡಲಗಾ ಜೈಲಿನಲ್ಲಿ ಪ್ರತ್ಯೇಕ ಸೆಲ್‌ನಲ್ಲಿ ಇರಿಸಲಾಗಿದೆ.

ಕೈದಿ ಜಯೇಶ್‌ ಜೈಲಿನಲ್ಲೂ ಹಲವರಿಗೆ ಬೆದರಿಕೆ ಹಾಕಿದ್ದ. ಆತನ ವರ್ತನೆಯೇ ಕ್ರೌರ್ಯದಿಂದ ಕೂಡಿದೆ’ ಎಂದು ಜೈಲಿನ ಮೂಲಗಳು ತಿಳಿಸಿವೆ. ಕೆಲ ಸಮಯದ ಹಿಂದೆ, ತಾನು ಪ್ರೀತಿಸುತ್ತಿರುವುದಾಗಿ ಹೇಳಿಕೊಳ್ಳುವ ಮಂಗಳೂರಿನ ಮಹಿಳೆಯನ್ನು ಭೇಟಿಯಾಗಲು ಬಯಸಿದ್ದು, ಆಕೆಯನ್ನು ಭೇಟಿಯಾಗಲು ಪೆರೋಲ್‌ನಲ್ಲಿ ಬಿಡುಗಡೆ ಮಾಡಬೇಕು ಎಂದು ಅವರು ಒತ್ತಾಯಿಸಿದ್ದ ಎಂದು ಮೂಲಗಳು ತಿಳಿಸಿವೆ.

ಜನವರಿ 14 ರಂದು ಬೆಳಿಗ್ಗೆ 11.25 ರಿಂದ ಮಧ್ಯಾಹ್ನ 12.30 ರ ನಡುವೆ ನಾಗ್ಪುರದ ಖಮ್ಲಾ ಪ್ರದೇಶದಲ್ಲಿ ಗಡ್ಕರಿ ಅವರ ಸಾರ್ವಜನಿಕ ಸಂಪರ್ಕ ಕಚೇರಿಯ ಲ್ಯಾಂಡ್‌ಲೈನ್ ಸಂಖ್ಯೆಗೆ ಕನಿಷ್ಠ ಮೂರು ಬೆದರಿಕೆ ಕರೆಗಳು ಬಂದಿದ್ದವು, ಕರೆ ಮಾಡಿದ ವ್ಯಕ್ತಿ ತಾನು ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯ ಎಂದು ಹೇಳಿಕೊಂಡಿದ್ದ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com