ಬೆಂಗಳೂರು: ಕಾರಿನ ಮೇಲೆ ಬಿದ್ದ ನಮ್ಮ ಮೆಟ್ರೊ ಬ್ಯಾರಿಕೇಡ್, ಅಪಾಯದಿಂದ ಪ್ರಯಾಣಿಕರು ಪಾರು
ಬೆಂಗಳೂರು: ಬೆಂಗಳೂರಿನ ಮೆಟ್ರೋ ನಿರ್ಮಾಣ ಸ್ಥಳದಲ್ಲಿ ಮತ್ತೊಂದು ಘಟನೆ ವರದಿಯಾಗಿದ್ದು, ನಾಲ್ಕು ಚಕ್ರದ ವಾಹನದ ಮೇಲೆ ಬ್ಯಾರಿಕೇಡ್ ಬಿದ್ದು, ಕುಟುಂಬ ಸದಸ್ಯರನ್ನು ಹೊತ್ತೊಯ್ಯುತ್ತಿದ್ದ ವಾಹನಕ್ಕೆ ಹಾನಿಯಾಗಿದ್ದು, ಚಾಲಕ ಸಂತೋಷ್ ಕುಮಾರ್ ಸೇರಿದಂತೆ ಕಾರಿನಲ್ಲಿದ್ದವರು ಸುರಕ್ಷಿತವಾಗಿದ್ದಾರೆ.
ಬೆಂಗಳೂರಿನ ಹೊರ ವರ್ತುಲ ರಸ್ತೆಯ ಮಹದೇವಪುರ ಬಳಿಯ ದೊಡ್ಡನೆಕ್ಕುಂದಿ ಜಂಕ್ಷನ್ನಲ್ಲಿ ಶನಿವಾರ ಸಂತೋಷ್ ಕುಮಾರ್ ಕುಟುಂಬ ಸಮೇತ ಮನೆಗೆ ತೆರಳುತ್ತಿದ್ದಾಗ ಮೆಟ್ರೊ ನಿರ್ಮಾಣ ಕಾಮಗಾರಿ ಸ್ಥಳದಲ್ಲಿ ನಿಲ್ಲಿಸಿದ್ದ ಬ್ಯಾರಿಕೇಡ್ನಿಂದ ಅಪಘಾತ ಸಂಭವಿಸಿದೆ.
ಮೂಲಗಳ ಪ್ರಕಾರ, ಕಾರ್ತಿಕ್ ನಗರವನ್ನು ದಾಟಿ ಕೆಆರ್ ಪುರಂ ಕಡೆಗೆ ಚಲಿಸುತ್ತಿದ್ದಾಗ ರಸ್ತೆಯ ಬ್ಲಾಕ್ ಕಾರಿನ ಮೇಲೆ ಬಿದ್ದು, ಕಾರು ಜಖಂಗೊಂಡಿದೆ. ಬೆಂಗಳೂರು ಮೆಟ್ರೋ ರೈಲು ಕಾರ್ಪೊರೇಷನ್ ಲಿಮಿಟೆಡ್ (BMRCL) ಪ್ರತಿನಿಧಿಗಳು ಸ್ಥಳಕ್ಕೆ ಆಗಮಿಸಿ ಪರಿಶೀಲಿಸಿದ್ದಾರೆ ಎಂದು ಹೇಳಿದರು.
ಬೆಂಗಳೂರಿನಲ್ಲಿ ನಿರ್ಮಾಣ ಸ್ಥಳದಲ್ಲಿ ಈ ತಿಂಗಳು ಸಂಭವಿಸಿದ ಮೂರನೇ ಅವಘಡ ಇದಾಗಿದೆ.
ಮೊನ್ನೆ ಜನವರಿ 10 ರಂದು ಬೆಂಗಳೂರಿನ ಹೊರ ವರ್ತುಲ ರಸ್ತೆಯ ನಾಗವಾರ ಬಳಿ ನಿರ್ಮಾಣ ಹಂತದಲ್ಲಿದ್ದ ಮೆಟ್ರೋ ಪಿಲ್ಲರ್ ಕುಸಿದು ಮಹಿಳೆ ಮತ್ತು ಆಕೆಯ ಪುಟ್ಟ ಮಗ ಸಾವಿಗೀಡಾಗಿದ್ದರು. ಮಹಿಳೆಯ ಪತಿ ಮತ್ತು ಮಗಳು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದರು.
ಎರಡು ದಿನಗಳ ನಂತರ ಜನವರಿ 12 ರಂದು, ಬ್ರಿಗೇಡ್ ರಸ್ತೆಯ ಮೆಟ್ರೋ ನಿರ್ಮಾಣದ ಸ್ಥಳದ ಬಳಿ ಟ್ರಿನಿಟಿ ಸರ್ಕಲ್ನಿಂದ ಶಿವಾಜಿನಗರ ಮಾರ್ಗದ ಬಳಿ ರಸ್ತೆಯು ಹಠಾತ್ ಕುಸಿದಿತ್ತು.
Follow KannadaPrabha channel on WhatsApp
KannadaPrabha News app ಡೌನ್ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ