8 ಕನ್ನಡಿಗರಿಗೆ ಪದ್ಮ ಪ್ರಶಸ್ತಿಯು ಕರ್ನಾಟಕದಲ್ಲಿನ ಅಪಾರ ಪ್ರತಿಭೆಯನ್ನು ತೋರಿಸುತ್ತದೆ: ಬಸವರಾಜ ಬೊಮ್ಮಾಯಿ

ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ.
ಸಿಎಂ ಬೊಮ್ಮಾಯಿ
ಸಿಎಂ ಬೊಮ್ಮಾಯಿ
Updated on

ಬೆಂಗಳೂರು: ವಿವಿಧ ಕ್ಷೇತ್ರಗಳ 8 ಮಂದಿ ಕನ್ನಡಿಗರಿಗೆ ಪ್ರತಿಷ್ಠಿತ ಪದ್ಮ ಪ್ರಶಸ್ತಿ ನೀಡುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಇದು ಕರ್ನಾಟಕದಲ್ಲಿರುವ ಅಮೋಘ ಪ್ರತಿಭೆಯನ್ನು ತೋರಿಸುತ್ತದೆ ಎಂದು ಗುರುವಾರ ಹೇಳಿದ್ದಾರೆ.

ಯಾವುದೇ ನಿರೀಕ್ಷೆಗಳಿಲ್ಲದೆ ದೇಶಕ್ಕೆ ಉತ್ಕೃಷ್ಟ ಕೊಡುಗೆ ನೀಡಿದವರನ್ನು ಪ್ರಶಸ್ತಿಗೆ ಆಯ್ಕೆ ಮಾಡಿದ್ದಕ್ಕಾಗಿ ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರದ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಕ್ಕೆ ಅವರು ಕೃತಜ್ಞತೆ ಸಲ್ಲಿಸಿದರು.

ಕರ್ನಾಟಕದಿಂದ ಮಾಜಿ ಸಿಎಂ ಎಸ್ಎಂ ಕೃಷ್ಣ, ಸಮಾಜ ಸೇವಕಿ ಸುಧಾ ಮೂರ್ತಿ ಮತ್ತು ಕನ್ನಡದ ಖ್ಯಾತ ಸಾಹಿತಿ ಪ್ರೊ ಎಸ್ಎಲ್ ಬೈರಪ್ಪ ಸೇರಿದಂತೆ ಎಂಟು ಮಂದಿ ಪದ್ಮ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಕರ್ನಾಟಕದಿಂದ ಎಂಟು ಮಂದಿಯ ಆಯ್ಕೆ ಕರ್ನಾಟಕದಲ್ಲಿರುವ ಅಗಾಧ ಪ್ರತಿಭೆಯನ್ನು ತೋರಿಸುತ್ತದೆ. ಸರ್ಕಾರ ಎಲ್ಲರಿಗೂ ಅಭಿನಂದನೆ ಸಲ್ಲಿಸಲು ಬಯಸುತ್ತದೆ ಎಂದು ಬೊಮ್ಮಾಯಿ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೋದಿ ಸರ್ಕಾರ ಯಾವುದೇ ನಿರೀಕ್ಷೆಗಳಿಲ್ಲದೆ ರಾಷ್ಟ್ರಕ್ಕೆ ಶ್ರೀಮಂತ ಕೊಡುಗೆ ನೀಡಿದ ಜನರನ್ನು ಆಯ್ಕೆ ಮಾಡಿದೆ ಮತ್ತು ಯಾವುದೇ ಪ್ರಚಾರಕ್ಕಾಗಿ ಎಂದಿಗೂ ಬಯಸಿಲ್ಲ. ಪ್ರಧಾನಿ ಮತ್ತು ಕೇಂದ್ರ ಸರ್ಕಾರ ಪ್ರತಿಷ್ಠಿತ ಪದ್ಮ ಪ್ರಶಸ್ತಿಗಳಿಗೆ ಆಯ್ಕೆ ಮಾಡುವಾಗ ಇತರ ವಿಷಯಗಳಿಗಿಂತ ಸಾಧನೆಗಳಿಗೆ ಹೆಚ್ಚಿನ ಆದ್ಯತೆ ನೀಡಿದೆ ಎಂದರು.

ಎಸ್ಎಂ ಕೃಷ್ಣ ಅವರಿಗೆ ಸಾರ್ವಜನಿಕ ವ್ಯವಹಾರಗಳಿಗಾಗಿ ಪದ್ಮವಿಭೂಷಣ, ಎಸ್ಎಲ್ ಭೈರಪ್ಪ ಮತ್ತು ಸುಧಾ ಮೂರ್ತಿ ಅವರಿಗೆ ಕ್ರಮವಾಗಿ ಸಾಹಿತ್ಯ ಮತ್ತು ಶಿಕ್ಷಣ ಹಾಗೂ ಸಮಾಜ ಕಾರ್ಯದಲ್ಲಿ ಪದ್ಮಭೂಷಣ ಪ್ರಶಸ್ತಿಯನ್ನು ನೀಡಲಾಗಿದೆ. ಕೆ.ವಿ. ದುಡೇಕುಲ (ವಿಜ್ಞಾನ ಮತ್ತು ಇಂಜಿನಿಯರಿಂಗ್), ರಾಣಿ ಮಾಚಯ್ಯ (ಕಲೆ), ಎನ್.ಪಿ.ಮುನಿವೆಂಕಟಪ್ಪ (ಕಲೆ), ರಶೀದ್ ಅಹಮದ್ ಕ್ವಾದ್ರಿ (ಕಲೆ) ಮತ್ತು ಎಸ್.ಸುಬ್ಬರಾಮನ್ (ಪುರಾತತ್ವ) ಅವರನ್ನು ಪದ್ಮ ಪ್ರಶಸ್ತಿಯನ್ನು ನೀಡಲಾಗಿದೆ. 

ಗಣರಾಜ್ಯೋತ್ಸವದಂದು ಜನರು ಸಂವಿಧಾನಕ್ಕಾಗಿ ತಮ್ಮನ್ನು ಸಮರ್ಪಿಸಿಕೊಳ್ಳಬೇಕು, ಅದನ್ನು ಅನುಸರಿಸಬೇಕು ಮತ್ತು ರಾಷ್ಟ್ರದ ಪ್ರಗತಿಗೆ ಪ್ರತಿಜ್ಞೆ ಮಾಡಬೇಕು ಎಂದು ಬೊಮ್ಮಾಯಿ ಕರೆ ನೀಡಿದರು.

ಇಲ್ಲಿನ ರಾಷ್ಟ್ರೀಯ ಯುದ್ಧ ಸ್ಮಾರಕದಲ್ಲಿ ಹುತಾತ್ಮ ಯೋಧರಿಗೆ ನಮನ ಸಲ್ಲಿಸಿದ ನಂತರ ಮಾತನಾಡಿದ ಅವರು, ಭಾರತವು ಸೂಪರ್ ಪವರ್ ಆಗಿ ಹೊರಹೊಮ್ಮಿದೆ ಮತ್ತು ಇದು ಶ್ರೀಮಂತ ಪರಂಪರೆ ಮತ್ತು ಪ್ರತ್ಯೇಕ ಮತ್ತು ವಿಶಿಷ್ಟ ಲಕ್ಷಣಗಳನ್ನು ಹೊಂದಿದೆ. ನಮ್ಮ ದೇಶ ಆಧುನಿಕ ಮತ್ತು ಪ್ರಗತಿಪರ ಮತ್ತು ಮಾನವೀಯವಾಗಿದೆ. ಸಬ್ ಕಾ ಸಾಥ್, ಸಬ್ ಕಾ ವಿಕಾಸ್, ಸಬ್ ಕಾ ಪ್ರಯಾಸ್ ಎಂಬ ವಿಷಯದೊಂದಿಗೆ ಮುನ್ನಡೆಯುತ್ತಿದೆ ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com