ಕಡಲ್ಕೊರೆತ ತಡೆ ಸಂಬಂಧಿಸಿದ ಯೋಜನೆಗಳಿಗೆ ಕೇಂದ್ರದ ನೆರವು ಅಗತ್ಯ: ಸಚಿವ ಮಂಕಾಳ ಎಸ್ ವೈದ್ಯ

ಕರ್ನಾಟಕದ 320 ಕಿಮೀ ಕರಾವಳಿ ರೇಖೆಯಲ್ಲಿ ವಿವಿಧ ಸ್ಥಳಗಳಲ್ಲಿ ಕಡಲ್ಕೊರೆತವನ್ನು ತಡೆಗಟ್ಟಲು ಶಾಶ್ವತ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರವು ನೀಡಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ರಾಜ್ಯ ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ.
ಸಚಿವ ಮಂಕಾಳ ಎಸ್ ವೈದ್ಯ
ಸಚಿವ ಮಂಕಾಳ ಎಸ್ ವೈದ್ಯ
Updated on

ಮಂಗಳೂರು: ಕರ್ನಾಟಕದ 320 ಕಿಮೀ ಕರಾವಳಿ ರೇಖೆಯಲ್ಲಿ ವಿವಿಧ ಸ್ಥಳಗಳಲ್ಲಿ ಕಡಲ್ಕೊರೆತವನ್ನು ತಡೆಗಟ್ಟಲು ಶಾಶ್ವತ ಯೋಜನೆಗಳನ್ನು ಕೈಗೊಳ್ಳಲು ಕೇಂದ್ರ ಸರ್ಕಾರವು ರಾಜ್ಯಕ್ಕೆ ನೆರವು ನೀಡಬೇಕು ಎಂದು ರಾಜ್ಯ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ರಾಜ್ಯ ಸಚಿವ ಮಂಕಾಳ ಎಸ್ ವೈದ್ಯ ಹೇಳಿದ್ದಾರೆ.

ಉಡುಪಿ ಜಿಲ್ಲೆಯ ಕೋಡಿ ಕನ್ಯಾನ ಮೀನುಗಾರಿಕಾ ಬಂದರಿಗೆ ಭಾನುವಾರ ಭೇಟಿ ನೀಡಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಡಲ್ಕೊರೆತ ತಡೆಗೆ ರಾಜ್ಯ ಸರಕಾರ ತಾತ್ಕಾಲಿಕ ಕ್ರಮಗಳನ್ನು ಕೈಗೊಳ್ಳುವ ಮೂಲಕ ಉತ್ತಮ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದರು.

ಆದರೆ, ಕೇಂದ್ರ ಸರ್ಕಾರದ ಬೆಂಬಲದೊಂದಿಗೆ ಹಂತ ಹಂತವಾಗಿ ಯೋಜನೆಗಳನ್ನು ಕೈಗೆತ್ತಿಕೊಂಡು ಶಾಶ್ವತ ಪರಿಹಾರವನ್ನು ಕಂಡುಕೊಳ್ಳಬೇಕು. ಬೆಂಗ್ರೆ, ಕೋಡಿ ಕನ್ಯಾನ ಮತ್ತು ಹಂಗಾರಕಟ್ಟೆಯಲ್ಲಿ ಮೀನುಗಾರರು ಎದುರಿಸುತ್ತಿರುವ ಸಮಸ್ಯೆಗಳನ್ನು ಮೀನುಗಾರಿಕೆ ಮತ್ತು ಬಂದರು ಇಲಾಖೆಗಳು ಜಂಟಿಯಾಗಿ ಪರಿಹರಿಸಲಿವೆ ಎಂದು ಹೇಳಿದರು.

ಕೋಡಿ ಕನ್ಯಾನ ಜೆಟ್ಟಿ ಯೋಜನೆಯನ್ನು ಶೀಘ್ರವೇ ಕೈಗೆತ್ತಿಕೊಳ್ಳಲಾಗುವುದು ಎಂದು ಭರವಸೆ ನೀಡಿದರು.

ಭೇಟಿ ವೇಳೆ ಮಾಜಿ ಸಚಿವ ಜಯಪ್ರಕಾಶ್ ಹೆಗ್ಡೆ ಹಾಗೂ ಮೀನುಗಾರರ ಮುಖಂಡರು ವೈದ್ಯ ಜೊತೆಗಿದ್ದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com