ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ: ರಾಜ್ಯಪಾಲ ಗೆಹ್ಲೋಟ್

ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.
ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಬಂದ ರಾಜ್ಯಪಾಲರನ್ನು ಸ್ವಾಗತಿಸಿದ ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲು ಬಂದ ರಾಜ್ಯಪಾಲರನ್ನು ಸ್ವಾಗತಿಸಿದ ವಿಧಾನಸಭಾಧ್ಯಕ್ಷರು ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ
Updated on

ಬೆಂಗಳೂರು: ಹಸಿದವರಿಗೆ ಅನ್ನ ನೀಡದ ಸರ್ಕಾರ ಜನದ್ರೋಹಿ ಸರ್ಕಾರವೆಂದು ಕರೆಸಿಕೊಳ್ಳುತ್ತದೆ ಎಂದು ರಾಜಪಾಲ ಥಾವರ್ ಚಂದ್ ಗೆಹ್ಲೋಟ್ (Thawar Chand Gehlot) ಅವರು ಪರೋಕ್ಷವಾಗಿ ಕೇಂದ್ರ ಸರ್ಕಾರದ (Union Government) ವಿರುದ್ಧ ಅಸಮಾಧಾನ ಹೊರಹಾಕಿದ್ದಾರೆ.

ಕರ್ನಾಟಕದಲ್ಲಿ ನೂತನ ಕಾಂಗ್ರೆಸ್ ಸರ್ಕಾರದ ವಿಧಾನಮಂಡಲ ಅಧಿವೇಶನ ಆರಂಭವಾಗಿದ್ದು, 10 ದಿನಗಳ ಕಾಲ ಈ ಅಧಿವೇಶನ ನಡೆಯಲಿದೆ. ಅಧಿವೇಶನ ಆರಂಭಕ್ಕೆ ಜಂಟಿ ಸದನವನ್ನುದ್ದೇಶಿಸಿ ರಾಜ್ಯಪಾಲರು ಮಾತನಾಡಿದರು.

ಹಸಿದವರಿಗೆ ಅನ್ನ ನೀಡಿ: ಕಳೆದ 34 ವರ್ಷಗಳಲ್ಲಿ ಯಾರಿಗೂ ಇಷ್ಟು ದೊಡ್ಡ ಬಹುಮತ ಸಿಕ್ಕಿರಲಿಲ್ಲ. ಯಾರಿಗೂ ನೀಡದ ಬಹುಮತದೊಂದಿಗೆ ಜನ ಕಾಂಗ್ರೆಸ್ ಸರ್ಕಾರವನ್ನು ಆಯ್ಕೆ ಮಾಡಿ ಅಧಿಕಾರಕ್ಕೆ ತಂದಿದ್ದಾರೆ. ಹಾಗಾಗಿ ಜನಕೇಂದ್ರಿತ ಅರ್ಥ ವ್ಯವಸ್ಥೆ, ಜನಕೇಂದ್ರಿತ ಶಾಸನಗಳನ್ನು ಈ ಸರ್ಕಾರ ಜಾರಿಗೊಳಿಸುತ್ತದೆ. ಎಲ್ಲ ಸಮುದಾಯಗಳ ಜೊತೆಗೆ ಅಭಿವೃದ್ಧಿ ಹಾದಿಯಲ್ಲಿ ಕೊಂಡೊಯ್ಯುವ ಮೂಲಕ ಸೌಹಾರ್ದಯುತ ಸಂದೇಶವನ್ನು ಸರ್ಕಾರ ನೀಡಲಿದೆ ಎಂದು ರಾಜ್ಯಪಾಲರು ಹೇಳಿದರು. 

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com