ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವು ಪ್ರಕರಣ, ತನಿಖೆ ವರದಿ ನಂತರ ಸೂಕ್ತ ಕ್ರಮ: ಇಂಧನ ಸಚಿವ ಕೆ.ಜೆ.ಜಾರ್ಜ್‌

ಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಯಲ್ಲಿಂದು ತಿಳಿಸಿದರು. 
ಕೆಜೆ ಜಾರ್ಜ್
ಕೆಜೆ ಜಾರ್ಜ್
Updated on

ಬೆಂಗಳೂರು: ಅಫಜಲಪುರ ತಾಲೂಕಿನ ಚೌಡಾಪುರ ಉಪವಿಭಾಗದಲ್ಲಿ ವಿದ್ಯುತ್‌ ಸ್ಪರ್ಶದಿಂದ ಲೈನ್ ಮನ್ ಸಾವನ್ನಪ್ಪಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಲಾಗಿದೆ ಮತ್ತು ತನಿಖೆಗೆ ಆದೇಶಿಸಲಾಗಿದ್ದು,ತನಿಖಾ ವರದಿ ಬಂದ ನಂತರ ಸೂಕ್ತ ಕ್ರಮಕೈಗೊಳ್ಳಲಾಗುವುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್‌ ವಿಧಾನಸಭೆಯಲ್ಲಿಂದು ತಿಳಿಸಿದರು. 

ಅಫಜಲಪುರ ಶಾಸಕ ಎಂ.ವೈ.ಪಾಟೀಲ್‌ ಅವರು ಶೂನ್ಯವೇಳೆಯಲ್ಲಿ ಪ್ರಸ್ತಾಪಿಸಿದ ವಿಷಯಕ್ಕೆ ಉತ್ತರಿಸಿದ ಸಚಿವರು, ಇದು ಅತ್ಯಂತ ದುರಂತ ಘಟನೆ. ಈಗಾಗಲೇ ಶಾಖಾಧಿಕಾರಿಗಳನ್ನು ಅಮಾನತುಗೊಳಿಸಿ ತನಿಖೆಗೆ ಆದೇಶಿಸಲಾಗಿದೆ. ತನಿಖಾ ವರದಿ ಅನುಸಾರ ಕ್ರಮಕೈಗೊಳ್ಳಲಾಗುವುದು. ಮೃತ ಮಾರ್ಗದಾಳು ಕುಟುಂಬಕ್ಕೆ 05ಲಕ್ಷ ರೂ.ಗಳ ಪರಿಹಾರ,ಅನುಕಂಪ ನೌಕರಿ,ವಿಮಾ ಸೇರಿ ಇನ್ನೀತರ ಸರಕಾರಿ ಸೌಲಭ್ಯಗಳನ್ನು ಕಲ್ಪಿಸಲಾಗುತ್ತದೆ ಎಂದರು. 

ಚೌಡಾಪುರ ಉಪವಿಭಾಗದಲ್ಲಿ ಲೈನ್ ಮನ್ ಶಾಖಾಧಿಕಾರಿಗಳ ಅನುಮತಿ ಪಡೆದುಕೊಂಡೇ ವಿದ್ಯುತ್‌ ಪರಿವರ್ತಕದ ದುರಸ್ತಿಗೆ ತೆರಳಿದ್ದರು. ಕಂಬ ಏರಿದಾಗ ವಿದ್ಯುತ್‌ ಸ್ಪರ್ಶಿಸಿ ಮಾರ್ಗದಾಳು ಸಾವನ್ನಪ್ಪಿದ್ದಾರೆ ಹೊರತು ಕಂಬದಿಂದ ಆಯಾತಪ್ಪಿ ಕೆಳಬಿದ್ದಿಲ್ಲ.ಇದು ಸಂಪೂರ್ಣ ಹೊಣೆ ಇಂಧನ ಇಲಾಖೆಯದ್ದಾಗಿದ್ದು,ಸದರಿ ಮೃತ ಮಾರ್ಗದಾಳು ಕುಟುಂಬಕ್ಕೆ 05ಲಕ್ಷ ಪರಿಹಾರದ ಬದಲಿಗೆ 50ಲಕ್ಷ ರೂ.ಗಳ ಪರಿಹಾರ ನೀಡಬೇಕು ಎಂದು ಅಫಜಲಪುರ ಶಾಸಕ ಎಂ.ವೈ.ಪಾಟೀಲ್‌ ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com