ಬೆಂಗಳೂರು: ಕಲಾಪದ ಎಲ್ಲಾ ದಿನಗಳಲ್ಲೂ ನಿಗದಿತ ಸಮಯಕ್ಕೆ ಬರುವ ಶಾಸಕರಿಗೆ ಬಹುಮಾನ ನೀಡಲಾಗುವುದು ಎಂದು ವಿಧಾನಸಭಾಧ್ಯಕ್ಷ ಯು.ಟಿ.ಖಾದರ್ ಅವರು ಬುಧವಾರ ಹೇಳಿದರು.
ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ್ದ ಶಾಸಕರಾದ ದರ್ಶನ್ ಪುಟ್ಟಣ್ಣಯ್ಯ, ಕೌಜಲಗಿ ಮಹಾಂತೇಶ್, ಎಸ್ ಸುರೇಶ್ ಕುಮಾರ್, ಪ್ರದೀಪ್ ಈಶ್ವರ್, ಎಸ್ ಆರ್ ಶ್ರೀನಿವಾಸ್, ಲತಾ ಮಲ್ಲಿಕಾರ್ಜುನ, ಶಿವಲಿಂಗೇಗೌಡ ಸೇರಿದಂತೆ ಇತರ ಶಾಸಕರ ಹೆಸರು ಓದಿದ ಸ್ಪೀಕರ್ ಶಾಸಕರ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಈ ವೇಳೆ ಕಲಾಪದ ಎಲ್ಲಾ ದಿನಗಳು ನಿಗದಿತ ಸಮಯಕ್ಕೆ ಸದನಕ್ಕೆ ಬಂದವರಿಗೆ ಬಹುಮಾನ ನೀಡಲಾಗುವುದು ಎಂದು ಸ್ಪೀಕರ್ ಹೇಳಿದರು.
ಈ ಸಂದರ್ಭದಲ್ಲಿ ಮಾತನಾಡಿದ ಶಾಸಕರೊಬ್ಬರು, ನಿಗದಿತ ಸಮಯಕ್ಕೆ ಸದನಕ್ಕೆ ಆಗಮಿಸಿದ ಶಾಸಕರಿಗೆ ಬಹುಮಾನ ಕೊಟ್ಟರೆ ತಪ್ಪು ಸಂದೇಶ ಹೋಗುತ್ತದೆ. ಬಹುಮಾನ ಘೋಷಣೆ ಬದಲಾಗಿ ಸರ್ಟಿಫಿಕೇಟ್ ಕೊಡಲು ಮನವಿ ಮಾಡಿದರು. ಇದಕ್ಕೆ ಸ್ಪೀಕರ್ ಸಮ್ಮತಿ ಸೂಚಿಸಿದರು.
Advertisement