ಕರಾವಳಿ ಭಾಗದಲ್ಲಿ ಧಾರಾಕಾರ ಮಳೆ; ಗದ್ದೆಯಲ್ಲಿ ತುಂಬಿಕೊಂಡಿದ್ದ ನೀರಿನಲ್ಲಿ ಮುಳುಗಿ ಇಬ್ಬರು ಸಾವು

ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ. ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಕಾರವಾರ: ಕುಮಟಾ ತಾಲ್ಲೂಕಿನ ಬೆಟ್ಕುಳಿ ಗ್ರಾಮದಲ್ಲಿ ಗದ್ದೆಯಲ್ಲಿ ತುಂಬಿದ್ದ ನೀರಿನಲ್ಲಿ ಮುಳುಗಿ ಗುರುವಾರ ರಾತ್ರಿ ಇಬ್ಬರು ಸಾವಿಗೀಡಾಗಿದ್ದಾರೆ.

ಸತೀಶ ಎಂಬುವವರಿಗೆ ಸೇರಿದ ಗದ್ದೆಗೆ ಬೇಲಿ ಹಾಕಲು ತೆರಳಿದ್ದ ವೇಳೆ ಘಟನೆ ನಡೆದಿದ್ದು, ಪೋಸ್ಟ್ ಬೆಟ್ಕುಳಿ ಗ್ರಾಮದವರಾದ ಸತೀಶ ನಾಯ್ಕ (39), ಉಲ್ಲಾಸ ಗಾವಡಿ (60) ಮೃತಪಟ್ಟಿದ್ದಾರೆ.

ಅಘನಾಶಿನಿ ನದಿ ನೀರಿನ ಮಟ್ಟ ಏರಿಕೆಯಾದ ಕಾರಣ ಗದ್ದೆಯಲ್ಲಿ ಪೂರ್ತಿ ನೀರು ತುಂಬಿಕೊಂಡಿತ್ತು. ಬೇಲಿ ಹಾಕುವ ವೇಳೆ ಉಲ್ಲಾಸ ಕಾಲು ಜಾರಿ ನೀರಿನಲ್ಲಿ ಬಿದ್ದಿದ್ದಾರೆ. ಈವೇಳೆ ಅವರನ್ನು ರಕ್ಷಿಸಲು ಮುಂದಾದ ಸತೀಶ ಕೂಡ ನೀರಿನಲ್ಲಿ ಮುಳುಗಿ ಸಾವಿಗೀಡಾಗಿದ್ದಾರೆ ಎಂದು ಗೋಕರ್ಮ ಠಾಣೆ ಪೊಲೀಸರು ತಿಳಿಸಿದ್ದಾರೆ.

ಕಳೆದ ಮೂರು ದಿನಗಳಿಂದ ಜಿಲ್ಲೆಯ ಕರಾವಳಿ ಭಾಗದಲ್ಲಿ ನಿರಂತರ ಮಳೆ ಸುರಿಯುತ್ತಿದ್ದು, ಮಳೆಯಿಂದಾಗಿ ಜೀವಹಾನಿಯಾದ ಎರಡನೇ ಪ್ರಕರಣ ಇದಾಗಿದೆ. ಜುಲೈ 5ರಂದು ಕಾರವಾರ ತಾಲ್ಲೂಕಿನ ಅರ್ಗಾ ಗ್ರಾಮದಲ್ಲಿ ವೃದ್ಧೆಯೊಬ್ಬರು ಮೃತಪಟ್ಟಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com