ಎನ್ಇಪಿ ಬದಲಿಗೆ ಕರ್ನಾಟಕ ತನ್ನದೇ ಶಿಕ್ಷಣ ನೀತಿಯನ್ನು ಜಾರಿಗೆ ತರಲಿದೆ: ಸಚಿವ ಮಧು ಬಂಗಾರಪ್ಪ

ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಳ್ಳದಿರಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಜಾರಿಗೆ ತರಲಿದೆ ಎಂದು ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.
ಮಧು ಬಂಗಾರಪ್ಪ
ಮಧು ಬಂಗಾರಪ್ಪ
Updated on

ಬೆಂಗಳೂರು: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ಅಳವಡಿಸಿಕೊಳ್ಳದಿರಲು ರಾಜ್ಯ ಶಿಕ್ಷಣ ಇಲಾಖೆ ನಿರ್ಧರಿಸಿದೆ. ಬದಲಿಗೆ ರಾಜ್ಯ ಶಿಕ್ಷಣ ನೀತಿಯನ್ನು (ಎಸ್‌ಇಪಿ) ಜಾರಿಗೆ ತರಲಿದೆ ಎಂದು ಕರ್ನಾಟಕ ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಶನಿವಾರ ಹೇಳಿದ್ದಾರೆ.

'ಕರ್ನಾಟಕದಲ್ಲಿ ಎನ್‌ಇಪಿ ಜಾರಿಗೊಳಿಸಬಾರದು ಎಂದು ಶಿಕ್ಷಣ ಇಲಾಖೆ ನಿರ್ಧರಿಸಿದೆ. ವೃತ್ತಿಪರ ತಂಡದ ಸಲಹೆ ಮೇರೆಗೆ ನಾವು ಎಸ್‌ಇಪಿ (ರಾಜ್ಯ ಶಿಕ್ಷಣ ನೀತಿ) ಜಾರಿಗೆ ತರಲು ಯೋಜಿಸುತ್ತಿದ್ದೇವೆ' ಎಂದು ಬೆಂಗಳೂರಿನ ಮಾದರಿ ಸರ್ಕಾರಿ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದ ನಂತರ ಸಚಿವರು ಹೇಳಿದರು.

ಈಮಧ್ಯೆ, ಕರ್ನಾಟಕ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಎನ್‌ಇಪಿ ಏಕಪಕ್ಷೀಯ ಎಂದು ಟೀಕಿಸಿದ್ದಾರೆ. 'ಎನ್‌ಇಪಿ ಒಳ್ಳೆಯದಲ್ಲ. ಇದು ಏಕಪಕ್ಷೀಯ. ಇದು ಪ್ರಜಾಪ್ರಭುತ್ವ ದೇಶ. ಇಲ್ಲಿ  ಬಹಳಷ್ಟು ಧರ್ಮಗಳಿವೆ. ನಾವು ನಮ್ಮದೇ ನೀತಿಯನ್ನು ಜಾರಿಗೆ ತರುತ್ತೇವೆ' ಎಂದು ಹೇಳಿದರು.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶುಕ್ರವಾರದ ತಮ್ಮ ಬಜೆಟ್ ಭಾಷಣದಲ್ಲಿ ಎನ್‌ಇಪಿಯನ್ನು ಹಿಂತೆಗೆದುಕೊಳ್ಳುವುದಾಗಿ ಘೋಷಿಸಿದ ಒಂದು ದಿನದ ನಂತರ ಸಚಿವರ ಈ ಹೇಳಿಕೆ ಹೊರಬಿದ್ದಿದೆ ಮತ್ತು ಬದಲಿಗೆ, ಸ್ಥಳೀಯ ವಾಸ್ತವಗಳಿಗೆ ಅನುಗುಣವಾಗಿ ತನ್ನದೇ ಆದ ಶಿಕ್ಷಣ ನೀತಿಯನ್ನು ರೂಪಿಸಲಿದೆ ಎಂದಿದ್ದಾರೆ.

ಭಾರತದಂತಹ ವೈವಿಧ್ಯಮಯ ದೇಶಕ್ಕೆ ಎನ್‌ಇಪಿ ಉತ್ತಮವಲ್ಲ. ಇದು ಒಕ್ಕೂಟದ ಆಡಳಿತ ವ್ಯವಸ್ಥೆಗೆ ಹೊಂದಿಕೆಯಾಗುವುದಿಲ್ಲ ಎಂದು ವಾದಿಸಿದರು.

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ರಾಷ್ಟ್ರೀಯ ಶಿಕ್ಷಣ ನೀತಿಯು ಒಕ್ಕೂಟದ ಆಡಳಿತ ವ್ಯವಸ್ಥೆಗೆ ಹೊಂದಿಕೆಯಾಗುವುದಿಲ್ಲ. ಇದು ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ದುರ್ಬಲಗೊಳಿಸುವ ಹಲವಾರು ಅಂಶಗಳನ್ನು ಹೊಂದಿದೆ. ವೈವಿಧ್ಯಮಯ ಧರ್ಮ, ಭಾಷೆ ಮತ್ತು ಸಂಸ್ಕೃತಿಗಳನ್ನು ಹೊಂದಿರುವ ಭಾರತದಂತಹ ರಾಷ್ಟ್ರಕ್ಕೆ ಏಕರೂಪ ಶಿಕ್ಷಣ ವ್ಯವಸ್ಥೆ ಹೊಂದುವುದಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

ಉನ್ನತ ಶಿಕ್ಷಣ ಮಟ್ಟದಲ್ಲಿ ಎನ್‌ಇಪಿಯನ್ನು ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಜಾರಿಗೆ ತಂದಿತ್ತು ಮತ್ತು ಇದನ್ನು ಶಾಲೆಗಳಲ್ಲಿ ಹೊರತರುವ ಪ್ರಕ್ರಿಯೆಯಲ್ಲಿತ್ತು.

ಜೂನ್‌ನಲ್ಲಿ, ಕರ್ನಾಟಕ ಉನ್ನತ ಶಿಕ್ಷಣ ಸಚಿವ ಎಂಸಿ ಸುಧಾಕರ್ ಅವರು ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ) ರದ್ದುಗೊಳಿಸುವ ಉದ್ದೇಶವನ್ನು ಕಾಂಗ್ರೆಸ್ ವ್ಯಾಪಕವಾಗಿ ಪ್ರಚಾರ ಮಾಡಿದ್ದರೂ, ಯಾವುದೇ ಆತುರದ ನಿರ್ಧಾರಗಳನ್ನು ತೆಗೆದುಕೊಳ್ಳುವ ಮೊದಲು ನೀತಿಯ ಸಾಧಕ-ಬಾಧಕಗಳ ಸಂಪೂರ್ಣ ವಿಶ್ಲೇಷಣೆ ಅಗತ್ಯವಿದೆ ಎಂದು ಹೇಳಿದ್ದರು.

'ನಾವು ನೀತಿಯ ಧನಾತ್ಮಕ ಮತ್ತು ಋಣಾತ್ಮಕ ಅಂಶಗಳನ್ನು ವಿಶ್ಲೇಷಿಸಲು ಬಯಸುತ್ತೇವೆ. ಪ್ರಣಾಳಿಕೆಯಲ್ಲಿ ಹೇಳಿದಂತೆ, ರಾಜ್ಯ ಶಿಕ್ಷಣ ನೀತಿಯನ್ನು ಜಾರಿಗೆ ತರಲಾಗುವುದು. ಆದರೆ, ಅದೇ ಸಮಯದಲ್ಲಿ, ವಿದ್ಯಾರ್ಥಿಗಳ ಸುಧಾರಣೆಯನ್ನು ಗಣನೆಗೆ ತೆಗೆದುಕೊಳ್ಳಬೇಕು. ವಿರೋಧವು ಯಾವಾಗಲೂ ಅದರ ವ್ಯಾಖ್ಯಾನವನ್ನು ಹೊಂದಿರುತ್ತದೆ. ನಾವು ಭರವಸೆ ನೀಡಿದ್ದನ್ನು ಈಡೇರಿಸಲಿದ್ದೇವೆ' ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com