ಮಂಗಳೂರು: ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನ ಬಂಧನ

ಮುಳಿಹಿತ್ಲು ಜಂಕ್ಷನ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ತನ್ನ ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಬಂಧಿಸಲಾಗಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಮಂಗಳೂರು: ಮುಳಿಹಿತ್ಲು ಜಂಕ್ಷನ್‌ನಲ್ಲಿ ನಡೆದ ಆಘಾತಕಾರಿ ಘಟನೆಯಲ್ಲಿ, ತನ್ನ ನೌಕರನನ್ನು ಸುಟ್ಟು ಕೊಂದ ಆರೋಪದ ಮೇಲೆ ಅಂಗಡಿ ಮಾಲೀಕನನ್ನು ಬಂಧಿಸಲಾಗಿದೆ.

ಪಾಂಡೇಶ್ವರದ ನಿವಾಸಿ ಮತ್ತು ಮಶುಪಾ ಜನರಲ್ ಸ್ಟೋರ್‌ನ ಮಾಲೀಕ ತೌಸೀಫ್ ಹಸನ್ (32) ತನ್ನ ನೌಕರ ಘಜ್ನಾನ್ ಅಲಿಯಾಸ್ ಝರು ಅವರನ್ನು ಕೊಲ್ಲುವ ಉದ್ದೇಶದಿಂದ ಅಂಗಡಿಯಲ್ಲಿಯೇ ಉದ್ದೇಶಪೂರ್ವಕವಾಗಿ ಬೆಂಕಿ ಹಚ್ಚಿದ ಆರೋಪಿಯಾಗಿದ್ದಾರೆ.

ಶನಿವಾರ ಬೆಳಗ್ಗೆ 8.30ರ ಸುಮಾರಿಗೆ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಅಂದು ಮಧ್ಯಾಹ್ನದ ಸುಮಾರಿಗೆ ತೌಸೀಫ್ ಸಾರ್ವಜನಿಕರಿಗೆ ಹಾಗೂ ಪೊಲೀಸರಿಗೆ ಘಜ್ನಾನ್ ವಿದ್ಯುತ್ ಸ್ಪರ್ಶದಿಂದ ಸಾವಿಗೀಡಾಗಿದ್ದಾನೆ ಎಂದು ಹೇಳಿ ತನಿಖಾಧಿಕಾರಿಗಳನ್ನು ದಾರಿತಪ್ಪಿಸಲು ಯತ್ನಿಸಿದ್ದರು.

ಘಟನೆಯ ನಂತರ ಘಜ್ನಾನ್ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಆ ವೇಳೆಗಾಗಲೇ ಆತ ಮೃತಪಟ್ಟಿರುವುದಾಗಿ ವೆನ್ಲಾಕ್ ಆಸ್ಪತ್ರೆಯ ವೈದ್ಯಕೀಯ ಸಿಬ್ಬಂದಿ ಘೋಷಿಸಿದರು. 

ಆದರೆ, ನಗರದ ದಕ್ಷಿಣ ಪೊಲೀಸರು ನಡೆಸಿದ ಪ್ರಾಥಮಿಕ ತನಿಖೆಯಿಂದ ಅಪರಾಧದ ನಿಜ ಸ್ವರೂಪ ಬಯಲಾಗಿದೆ. ತನಿಖೆಯ ನಂತರ ತೌಸೀಫ್ ಹಸನ್ ನನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com