ಇಸ್ರೋ ಮಾಜಿ ಅಧ್ಯಕ್ಷ ಕಸ್ತೂರಿರಂಗನ್ ಗೆ ಹೃದಯಾಘಾತ; ಶ್ರೀಲಂಕಾದಿಂದ ಬೆಂಗಳೂರಿಗೆ ಏರ್‌ಲಿಫ್ಟ್

ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್  ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.
ಕಸ್ತೂರಿರಂಗನ್
ಕಸ್ತೂರಿರಂಗನ್
Updated on

ಬೆಂಗಳೂರು: ಖ್ಯಾತ ವಿಜ್ಞಾನಿ, ಭಾರತೀಯ ಬಾಹ್ಯಾಕಾಶ ಸಂಸ್ಥೆ(ಇಸ್ರೋ)ಯ ಮಾಜಿ ಅಧ್ಯಕ್ಷ ಡಾ.ಕೆ ಕಸ್ತೂರಿರಂಗನ್  ಅವರಿಗೆ ಕೊಲಂಬೊದಲ್ಲಿ ಸೋಮವಾರ ಲಘು ಹೃದಯಾಘಾತವಾಗಿದ್ದು, ಅವರನ್ನು ಬೆಂಗಳೂರಿಗೆ ಏರ್ ಲಿಫ್ಟ್ ಮಾಡಲಾಗುತ್ತಿದೆ.

83 ವರ್ಷದ ಕಸ್ತೂರಿರಂಗನ್ ಅವರನ್ನು ವಿಮಾನದ ಮೂಲಕ ಕೊಲಂಬೊದಿಂದ ಬೆಂಗಳೂರಿಗೆ ಕರೆತರಲಾಗುತ್ತಿದೆ. ಸಂಜೆ 5.30ಕ್ಕೆ ಎಚ್ಎಎಲ್ ಏರ್​ಪೋರ್ಟ್​ಗೆ ಆಗಮಿಸಲಿದ್ದಾರೆ. ಝೀರೋ ಟ್ರಾಫಿಕ್ ಮೂಲಕ ನಾರಾಯಣ ಹೃದಯಾಲಯಕ್ಕೆ ಅವರನ್ನು ದಾಖಲಿಸಲಾಗುತ್ತಿದೆ.

ಶ್ರೀಲಂಕಾಕ್ಕೆ ತೆರಳಿದ್ದ ಸಮಯದಲ್ಲಿ ಕಸ್ತೂರಿರಂಗನ್ ಅವರಿಗೆ ಹೃದಯಾಘಾತವಾಗಿದೆ. ಸದ್ಯ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಮೂಲಗಳು ತಿಳಿಸಿವೆ.

ಕಸ್ತೂರಿರಂಗನ್ ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿನ ನಾರಾಯಣ ಹೃದಯಾಲಯಕ್ಕೆ ಶಿಫ್ಟ್​ ಮಾಡಲಾಗುತ್ತಿದ್ದು, ಖ್ಯಾತ ಹೃದ್ರೋಗ ತಜ್ಞ ಡಾ. ದೇವಿ ಶೆಟ್ಟಿ ಅವರು ಚಿಕಿತ್ಸೆ ನೀಡಲಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com