ಜೈನ ಮುನಿಗಳ ಹತ್ಯೆ ಪ್ರಕರಣ: ಸಿಬಿಐ ತನಿಖೆಗೆ ವಹಿಸುವ ಅಗತ್ಯವಿಲ್ಲ; ಗೃಹ ಸಚಿವ ಡಾ. ಜಿ ಪರಮೇಶ್ವರ್‌

ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ.
ಗೃಹ ಸಚಿವ ಡಾ. ಜಿ ಪರಮೇಶ್ವರ್‌
ಗೃಹ ಸಚಿವ ಡಾ. ಜಿ ಪರಮೇಶ್ವರ್‌

ಹುಬ್ಬಳ್ಳಿ: ಜೈನಮುನಿ ಕಾಮಕುಮಾರ ನಂದಿ ಮಹಾರಾಜರ ಬರ್ಬರ ಹತ್ಯೆ ಆರೋಪಿಗಳ ವಿರುದ್ಧ ಪೊಲೀಸರು ಕ್ರಮ ಕೈಗೊಳ್ಳಲಿದ್ದಾರೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ನೋಡಿಕೊಳ್ಳಲಾಗುತ್ತದೆ ಎಂದು ಗೃಹ ಸಚಿವ ಡಾ. ಜಿ ಪರಮೇಶ್ವರ್‌ ಅವರು ಸೋಮವಾರ ಭರವಸೆ ನೀಡಿದ್ದಾರೆ.

ಹುಬ್ಬಳ್ಳಿಯ ವರೂರಿನ ಜೈನಮುನಿ ಗುಣಧರನಂದಿ ಮಾಹಾರಾಜ್ ಸ್ವಾಮೀಜಿಗಳ ಭೇಟಿ ಮಾಡಿದ ಬಳಿಕ ಮಾತನಾಡಿದ ಅವರು, ಜೈನ ಮುನಿಗಳ ಹತ್ಯೆ ಪ್ರಕರಣದಲ್ಲಿ ಯಾರೂ ರಾಜಕೀಯ, ತಾರತಮ್ಯ ಮಾಡುವುದಿಲ್ಲ. ಜೈನಮುನಿ ಹತ್ಯೆ ಆರೋಪಿಗಳನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ. ನಮ್ಮ ಇಲಾಖೆ ಅಧಿಕಾರಿಗಳಿಗೆ ಅಭಿನಂದನೆ ಸಲ್ಲಿಸುತ್ತೇನೆ. ಮುಂದಿನ ದಿನದಲ್ಲಿ ಇಂತಹ ಕೃತ್ಯ ಮರುಕಳಿಸದಂತೆ ಎಚ್ಚರ ವಹಿಸಲಾಗುವುದು ಎಂದು ಹೇಳಿದರು.

ಅಪರಾಧಿಗಳ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆ ಇದೆ. ಇದು ಸ್ವಾಭಾವಿಕ ಪದ್ದತಿ, ಇದರಲ್ಲಿ ತಾರತಮ್ಯ ಪ್ರಶ್ನೆ ಇಲ್ಲ. ಘಟನೆ ಆದ ಮೇಲೆ ಆರೋಪಿಗಳನ್ನು ಬಂಧಿಸಲಾಗಿದೆ. ವರೂರಲ್ಲಿ ಜೈನ ಮುನಿಗಳು ಉಪವಾಸ ಕೂಳಿತಿದ್ದಾರೆ. ಅವರ ಬೇಡಿಕೆಗಳನ್ನು ಆಲಿಸಲಾಗುವುದು ಎಂದು ತಿಳಿಸಿದರು.

ನಮ್ಮ ಗೃಹ ಇಲಾಖೆ ಸಮರ್ಥವಾಗಿದೆ. ಆರೋಪಿಗಳು ಪೊಲೀಸರ ವಶದಲ್ಲಿದ್ದು ತನಿಖೆ ಶುರುವಾಗಿದೆ. ಪ್ರಕರಣವನ್ನು ಸಿಬಿಐಗೆ ನೀಡುವ ಅಗತ್ಯ ಇಲ್ಲ. ಗೃಹ ಇಲಾಖೆಯೇ ಸಮರ್ಥವಾಗಿದೆ. ನಮ್ಮ ಇಲಾಖೆಯ ತನಿಖೆ ಮುಗಿದ ಬಳಿಕ ಸತ್ಯಾಸತ್ಯತೆ ಗೊತ್ತಾಗಲಿದೆ. ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಆಗಲಿದೆ ಎಂದರು.

ಸುಮ್ಮನೆ ನಮ್ಮ ವಿರುದ್ಧ ಅಪವಾದ ಹೊರಿಸುವ ಬಿಜೆಪಿಗೆ ವಿರೋಧ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಆಗುತ್ತಿಲ್ಲ. ಅವರಲ್ಲಿ ಆಂತರಿಕ ಒಳಜಗಳ ಇದೆ‌. ಅವರಿಗೆ ಎಷ್ಟರ ಮಟ್ಟಿಗೆ ಜವಾಬ್ದಾರಿ ಇದೆ ಎಂಬುದನ್ನು ರಾಜ್ಯದ ಜನ ಗಮನಿಸುತ್ತಿದ್ದಾರೆ ಎಂದು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com