ಜಿ ಪರಮೇಶ್ವರ
ಜಿ ಪರಮೇಶ್ವರ

ರಾಜ್ಯದಲ್ಲಿನ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಲಾಗುವುದು: ಗೃಹ ಸಚಿವ ಜಿ. ಪರಮೇಶ್ವರ

ನಗರ ಪ್ರದೇಶಗಳಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.
Published on

ತುಮಕೂರು: ನಗರ ಪ್ರದೇಶಗಳಿಂದ ಅಪಾರ ಪ್ರಮಾಣದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗುತ್ತಿದ್ದು, ರಾಜ್ಯದಲ್ಲಿ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಲಾಗುವುದು ಎಂದು ಗೃಹ ಸಚಿವ ಜಿ. ಪರಮೇಶ್ವರ್ ಭಾನುವಾರ ತಿಳಿಸಿದ್ದಾರೆ.

ಕಳೆದ ಎರಡು ತಿಂಗಳಲ್ಲಿ ರಾಜ್ಯದಲ್ಲಿ 150 ಕೋಟಿಯಿಂದ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ವಿಲೇವಾರಿಯಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

'ಕರ್ನಾಟಕದಲ್ಲಿ ಡ್ರಗ್ಸ್ ಹಾವಳಿಯನ್ನು ನಿಲ್ಲಿಸಬೇಕು ಎಂಬ ನಿರ್ಧಾರವನ್ನು ತೆಗೆದುಕೊಂಡಿದ್ದೇನೆ. ಅಲ್ಲೊಂದು ಇಲ್ಲೊಂದು ಡ್ರಗ್ಸ್ ವಶಪಡಿಸಿಕೊಳ್ಳುತ್ತಿರುವ ಬಗ್ಗೆ ಮಾಧ್ಯಮಗಳಲ್ಲಿ ಓದುತ್ತಲೇ ಇರುತ್ತೇನೆ. ಕಳೆದ ಒಂದೂವರೆ ತಿಂಗಳಲ್ಲಿ 150 ಕೋಟಿಯಿಂದ 200 ಕೋಟಿ ರೂಪಾಯಿ ಮೌಲ್ಯದ ಡ್ರಗ್ಸ್ ಸುಟ್ಟು ಕರಕಲಾಗಿದೆ’ ಎಂದು ಕೊರಟಗೆರೆಯಲ್ಲಿ ನಡೆದ ಸಾರ್ವಜನಿಕ ಸಭೆಯಲ್ಲಿ ಪರಮೇಶ್ವರ ಹೇಳಿದರು.

ರಾಜ್ಯದ ನಗರ ಪ್ರದೇಶಗಳಲ್ಲಿ ಡ್ರಗ್ಸ್ ದಂಧೆ ನಿತ್ಯದ ಸಂಗತಿಯಾಗಿದೆ. ಕರ್ನಾಟಕದಲ್ಲಿ ಈ ಅಪಾಯವನ್ನು ಸರ್ಕಾರ ತಡೆಯುತ್ತದೆ. ಡ್ರಗ್ಸ್ ಸೇವನೆಯು ಆರೋಗ್ಯದ ಮೇಲೆ ಋಣಾತ್ಮಕ ಪರಿಣಾಮ ಬೀರುವುದರಿಂದ ಅದು ಕೆಟ್ಟದು. ಗಾಂಜಾ ಸೇವನೆ ದೇಹದ ಮೇಲೆ ಪರಿಣಾಮ ಬೀರುತ್ತದೆ. ದೀರ್ಘಕಾಲದವರೆಗೆ ತೆಗೆದುಕೊಂಡ ನಂತರ ಅದರ ಅಡ್ಡಪರಿಣಾಮಗಳು ಕಂಡುಬರುತ್ತವೆ ಎಂದರು.

'ಆದಾಗ್ಯೂ, ಇತ್ತೀಚಿನ ದಿನಗಳಲ್ಲಿ, ಮಾತ್ರೆಗಳ ರೂಪದಲ್ಲಿ ಮೀಥೈಲೆನೆಡಿಯೋಕ್ಸಿಮೆಥಾಂಫೆಟಮೈನ್ (MDMA) ಮತ್ತು ಮುಂತಾದ ರಾಸಾಯನಿಕ ಡ್ರಗ್ಸ್ ಕಂಡುಬಂದಿವೆ. ಇದು ನರಮಂಡಲದ ಮೇಲೆ ಪರಿಣಾಮ ಬೀರುತ್ತದೆ. ಅಂದರೆ ಸಂಪೂರ್ಣ ಆರೋಗ್ಯವು ಹಾಳಾಗುತ್ತದೆ. ಇತ್ತೀಚಿನ ದಿನಗಳಲ್ಲಿ ಇದರ ಬಳಕೆ ಹೆಚ್ಚುತ್ತಿದೆ' ಎಂದು ಪರಮೇಶ್ವರ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

X

Advertisement

X
Kannada Prabha
www.kannadaprabha.com