ಮೈಸೂರು: ಯುವ ಬ್ರಿಗೇಡ್ ಸಂಚಾಲಕ ವೇಣುಗೋಪಾಲ್ ಹತ್ಯೆ; ಆರು ಮಂದಿ ಬಂಧನ

ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಕೊಲೆಯಾದ ವೇಣುಗೋಪಾಲ್ ನಾಯಕ್
ಕೊಲೆಯಾದ ವೇಣುಗೋಪಾಲ್ ನಾಯಕ್
Updated on

ಮೈಸೂರು: ಜಿಲ್ಲೆಯ ಟಿ. ನರಸೀಪುರದಲ್ಲಿ ಕಳೆದ ಭಾನುವಾರ ನಡೆದಿದ್ದ ಯುವ ಬ್ರಿಗೇಡ್ ಸಂಘಟನೆ ಸಂಚಾಲಕ ವೇಣುಗೋಪಾಲ ನಾಯಕ (31) ಹತ್ಯೆ ಪ್ರಕರಣದ ಆರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಯುವ ಬ್ರಿಗೇಡ್ ಕಾರ್ಯಕರ್ತ ವೇಣುಗೋಪಾಲ ನಾಯಕ್‌ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಮಣಿಕಂಠ, ಸಂದೇಶ, ಅನಿಲ್, ಶಂಕರ್, ಮಂಜು ಹಾಗೂ ಹ್ಯಾರಿಸ್ ಬಂಧಿತ ಆರೋಪಿಗಳು. ಎಲ್ಲರೂ ಸ್ಥಳೀಯರೇ ಆಗಿದ್ದಾರೆ. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆ ಎಂದು ಪೊಲೀಸರು‌ ಮಾಹಿತಿ ನೀಡಿದರು. ಉಳಿದವರ ಪತ್ತೆಗೂ ತಂಡ ರಚನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೈಸೂರು ಜಿಲ್ಲೆಯ ಟಿ. ನರಸೀಪುರದಲ್ಲಿ ಹನುಮ ಜಯಂತಿ  ವೇಳೆ ಎರಡು ಗುಂಪುಗಳ ನಡುವೆ ನಡೆದ ಜಗಳ ಯುವ ಬ್ರಿಗೇಡ್​  ಕಾರ್ಯಕರ್ತನ ಕೊಲೆಯಲ್ಲಿ ಅಂತ್ಯವಾಗಿದೆ. ಶನಿವಾರ ಪಟ್ಟಣದಲ್ಲಿ ಹನುಮ ಜಯಂತಿ ಮೆರವಣಿಗೆ ನಡೆದಿತ್ತು. ಈ ವೇಳೆ ಎರಡು ಗುಂಪುಗಳ ನಡುವೆ ಜಗಳ ನಡೆದಿತ್ತು. ಮೆರವಣಿಗೆ ವೇಳೆ ಸಂಧಾನ ಮಾಡಿ ಕಳುಹಿಸಲಾಗಿತ್ತು. ಆದರೆ ಭಾನುವಾರ ಮತ್ತೆ ಜಗಳ ನಡೆದಿತ್ತು, ಆ ವೇಳೆ ವೇಣುಗೋಪಾಲ್ ನಾಯಕ್ ಹತ್ಯೆ ಮಾಡಲಾಗಿತ್ತು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com