ಬೆಂಗಳೂರು: ಬಿಡಿಎ, ಬಿಬಿಎಂಪಿ, ಕೆಐಎಡಿಬಿಬಿ ಅಕ್ರಮಗಳ ತನಿಖೆಗೆ ಟಾಸ್ಕ್ ಫೋರ್ಸ್ ರಚನೆ?

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್
Updated on

ಬೆಂಗಳೂರು: ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರ (ಬಿಡಿಎ), ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಮತ್ತು ಕರ್ನಾಟಕ ಕೈಗಾರಿಕಾ ಪ್ರದೇಶಾಭಿವೃದ್ಧಿ ಮಂಡಳಿ (ಕೆಐಎಡಿಬಿ) ನಂತಹ ವಿವಿಧ ಏಜೆನ್ಸಿಗಳಲ್ಲಿನ ಹಗರಣಗಳ ತನಿಖೆಗೆ ಕಾರ್ಯಪಡೆ ರಚಿಸುವುದನ್ನು ಪರಿಗಣಿಸುವುದಾಗಿ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ಗುರುವಾರ ವಿಧಾನ ಪರಿಷತ್ತಿಗೆ ತಿಳಿಸಿದರು.

ಇಲಾಖೆಗಳಲ್ಲಿ ನಡೆದಿದೆ ಎನ್ನಲಾದ ಅವ್ಯವಹಾರಗಳ ತನಿಖೆಗೆ ನಾಲ್ಕೈದು ಹಿರಿಯ ಅಧಿಕಾರಿಗಳನ್ನೊಳಗೊಂಡ ಕಾರ್ಯಪಡೆ ರಚಿಸಬೇಕು ಎಂಬ ಜೆಡಿಎಸ್ ಸದಸ್ಯ ಮರಿತಿಬ್ಬೇಗೌಡ ಅವರ ಸಲಹೆಗೆ ಅವರು ಪ್ರತಿಕ್ರಿಯಿಸಿದರು.

ಇದೇ ರೀತಿಯ ಸಲಹೆಯನ್ನು ನಗರದ ಶಾಸಕರು ನೀಡಿದ್ದು, ಶೀಘ್ರದಲ್ಲೇ ಈ ಬಗ್ಗೆ ನಿರ್ಧಾರ ತೆಗೆದುಕೊಳ್ಳಲಾಗುವುದು ಎಂದು ಹೇಳಿದರು.

ಬೆಂಗಳೂರು ಮೆಟ್ರೊ ರೈಲು ಯೋಜನೆಗೆ ಭೂಸ್ವಾಧೀನಕ್ಕೆ 24 ಕೋಟಿ ರೂ.ಗಳನ್ನು ಅನರ್ಹರಿಗೆ ನೀಡಲಾಗಿದೆ ಮತ್ತು ಈ ಬಗ್ಗೆ ತನಿಖೆಯಾಗಬೇಕು. ಬೊಮ್ಮನಹಳ್ಳಿಯಲ್ಲಿ ಸುಮಾರು 3,000 ಕೋಟಿ ಮೌಲ್ಯದ ಭೂಮಿಯನ್ನು ಪೊಲೀಸರು ಮತ್ತು ಕಂದಾಯ ಇಲಾಖೆ ಅಧಿಕಾರಿಗಳ ಶಾಮೀಲಾಗಿ ಅನೈತಿಕ ಶಕ್ತಿಗಳು ಒತ್ತುವರಿ ಮಾಡಿದ್ದಾರೆ ಎಂದು ಜೆಡಿಎಸ್ ಎಂಎಲ್‌ಸಿ ಆರೋಪಿಸಿದ್ದಾರೆ.

ಮಾರ್ಗಸೂಚಿಗಳನ್ನು ಅನುಸರಿಸಿ ಬಿಡಿಎ 1,096 ಪರ್ಯಾಯ ನಿವೇಶನಗಳನ್ನು ಮಂಜೂರು ಮಾಡಿದೆ. ದೂರುಗಳಿದ್ದಲ್ಲಿ ಎಸ್ಪಿ (ವಿಜಿಲೆನ್ಸ್) ಬಿಡಿಎ ಅವರಿಂದ ವರದಿ ಪಡೆದು ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com