ತುಮಕೂರು: ಮಗಳನ್ನು ಕತ್ತು ಹಿಸುಕಿ ಕೊಂದ ಮಹಿಳೆ ಬಂಧನ

ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ತುಮಕೂರು: ಮಹಿಳೆಯೊಬ್ಬಳು ತನ್ನ ಆರು ವರ್ಷದ ಮಗಳನ್ನು ಕತ್ತು ಹಿಸುಕಿ ಕೊಂದಿರುವ ಆಘಾತಕಾರಿ ಘಟನೆ ತುಮಕೂರು ಜಿಲ್ಲೆಯ ಶಾಂತಿನಗರದಲ್ಲಿ ನಡೆದಿದೆ.

ಹೇಮಲತಾ ಎಂಬ ಆರೋಪಿಯು ಶುಕ್ರವಾರ ತನ್ನ ಮಗಳು ತನ್ವಿತಾಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಳು. ಬಾಲಕಿಯ ಕಿರುಚಾಟ ಕೇಳಿ ಅಕ್ಕಪಕ್ಕದವರು ಮನೆಗೆ ಬಂದು ಹೇಮಲತಾಳಿಂದ ಮಗುವನ್ನು ಕಿತ್ತುಕೊಂಡಿದ್ದಾರೆ. ಆದರೆ ತನ್ವಿತಾ ಸಾವನ್ನಪ್ಪಿದ್ದಳು.

ಮಾಹಿತಿ ಪಡೆದ ಪೊಲೀಸರು ಹೇಮಲತಾ ಅವರನ್ನು ಬಂಧಿಸಿದ್ದಾರೆ. ಹೇಮಲತಾ ಮಾನಸಿಕ ಅಸ್ವಸ್ಥಳಾಗಿದ್ದಳು ಎಂದು ಕುಟುಂಬಸ್ಥರು ಹೇಳುತ್ತಿದ್ದಾರೆ. ಮಾನಸಿಕ ಅಸ್ವಸ್ಥೆಯನ್ನು ಮಗುವಿನೊಂದಿಗೆ ಏಕಾಂಗಿಯಾಗಿರಲು ಬಿಡಲಾಗಿತ್ತೆ ಎಂದು ಪೊಲೀಸರು ಪ್ರಶ್ನಿಸಿದ್ದಾರೆ. ತುಮಕೂರಿನ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com