ಜಯದೇವ ನಿರ್ದೇಶಕ ಡಾ. ಸಿ​.ಎನ್.​ಮಂಜುನಾಥ್ ಸೇವಾವಧಿ ಮತ್ತೆ 6 ತಿಂಗಳು ವಿಸ್ತರಣೆ

ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.
ಡಾ.ಸಿ​.ಎನ್.​ ಮಂಜುನಾಥ್
ಡಾ.ಸಿ​.ಎನ್.​ ಮಂಜುನಾಥ್

ಬೆಂಗಳೂರು: ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕ ಡಾ.ಸಿ.ಎನ್. ಮಂಜುನಾಥ್ ಅವರ ಸೇವಾವಧಿಯನ್ನು ಮತ್ತೆ 6 ತಿಂಗಳು ವಿಸ್ತರಿಸಿ ರಾಜ್ಯ ಸರ್ಕಾರ ಸೋಮವಾರ ಆದೇಶ ಹೊರಡಿಸಿದೆ.

2007ರಿಂದ ಜಯದೇವ ಹೃದ್ರೋಗ ಆಸ್ಪತ್ರೆಯ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿರುವ ಡಾ.ಸಿಎನ್ ಮಂಜುನಾಥ್ ಅವರ ಅಧಿಕಾರ ಅವಧಿ ಕಳೆದ ವರ್ಷವೇ ಮುಕ್ತಾಯವಾಗಿತ್ತು. ಆದರೆ ರೋಗಿಗಳು ಮತ್ತು ಸಿಬ್ಬಂದಿ ಒತ್ತಾಯದ ಮೇರೆಗೆ ಈ ಹಿಂದಿನ ಬಿಜೆಪಿ ಸರ್ಕಾರ ಮಂಜುನಾಥ್ ಅವರ ಅವಧಿಯನ್ನು 1 ವರ್ಷ ವಿಸ್ತರಣೆ ಮಾಡಿತ್ತು ಮತ್ತು ಜುಲೈ 19ಕ್ಕೆ ಡಾ.ಸಿ.ಎನ್​.ಮಂಜುನಾಥ್ ಅವರ ಅವಧಿ ಮುಕ್ತಾಯಗೊಳ್ಳಲಿತ್ತು.

ಈ ಹಿನ್ನೆಲೆಯಲ್ಲಿ ಇಂದು ವಿಧಾನಸೌಧದಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಲಬುರಗಿ ಜಯದೇವ ಆಸ್ಪತ್ರೆಯ ಕೆಲಸ ಜವಾಬ್ದಾರಿ ಹಿನ್ನಲೆಯಲ್ಲಿ ಜನವರಿ ತಿಂಗಳವರೆಗೆ ಡಾ.ಸಿಎನ್ ಮಂಜುನಾಥ್ ಅವರನ್ನು ನಿರ್ದೇಶಕರಾಗಿ ಮುಂದುವರಿಸುವ ನಿರ್ಧಾರ ಕೈಗೊಂಡಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com