ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ದೇವಾಲಯಗಳಲ್ಲಿ ಮೊಬೈಲ್ ಬಳಕೆ ನಿಷೇಧ: ರಾಜ್ಯ ಸರ್ಕಾರ ಆದೇಶ

ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on

ಬೆಂಗಳೂರು: ಧಾರ್ಮಿಕ ದತ್ತಿ ಇಲಾಖೆಯ ವ್ಯಾಪ್ತಿಯಡಿ ಬರುವ ಎಲ್ಲಾ ದೇವಾಲಯಗಳಲ್ಲಿ ಮೊಬೈಲ್ ಬಳಕೆ ಮೇಲೆ ನಿಷೇಧ ಹೇರುವಂತೆ ರಾಜ್ಯ ಸರಕಾರ ಸೋಮವಾರ ಆದೇಶ ಹೊರಡಿಸಿದೆ.

ದೇವಾಲಯಗಳ ಆವರಣದಲ್ಲಿ ಇತ್ತೀಚಿನ ದಿನಗಳಲ್ಲಿ ಮೊಬೈಲ್ ಬಳಕೆ ಹೆಚ್ಚಾಗಿರುವ ಕಾರಣ ಭಕ್ತರು ದೇವಾಲಯಕ್ಕೆ ಆಗಮಿಸಿದಾಗ ಮೊಬೈಲ್ ಬಳಕೆ ಶಬ್ದಗಳಿಂದ ದೇವಾಲಯದ ಸಿಬ್ಬಂದಿಗಳಿಗೂ ಹಾಗೂ ದೇವರ ದರ್ಶನಕ್ಕೆ ಬರುವ ಭಕ್ತರಿಗೂ ತೊಂದರೆಯಾಗುತ್ತಿರುವ ಹಿನ್ನೆಲೆ ಮೊಬೈಲ್ ಬಳಕೆ ನಿಷೇಧಿಸಲಾಗಿದ್ದು, ಭಕ್ತರು ದೇವಾಲಯಗಳ ಸೂಚನಾ ಫಲಕಗಳಲ್ಲಿ ಉಲ್ಲೇಖಿಸಿರುವ ಸೂಚನೆಗಳನ್ನು ಪಾಲಿಸುವಂತೆ ಧಾರ್ಮಿಕ ದತ್ತಿ ಇಲಾಖೆ ಮನವಿ ಮಾಡಿದೆ.

ಈ ಬಗ್ಗೆ ಸೂಚನಾ ಪತ್ರದಲ್ಲಿ ಮಾಹಿತಿ ನೀಡುವಂತೆ ದೇವಾಲಯಗಳ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಸೂಚಿಸಲಾಗಿದೆ ಎಂದೂ ಸುತ್ತೋಲೆಯಲ್ಲಿ ತಿಳಿಸಲಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com