ಬೆಂಗಳೂರು: ಲಾರಿ ಡಿಕ್ಕಿಯಾಗಿ ಹಳ್ಳಕ್ಕೆ ಬಿದ್ದ ಬೈಕ್, ಸ್ಥಳದಲ್ಲೇ ಮೂವರು ದುರ್ಮರಣ

ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ. 
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಹೊಸಕೋಟೆ: ಬೈಕ್ ಗೆ ಲಾರಿಯೊಂದು ಡಿಕ್ಕಿ ಹೊಡೆದ ಪರಿಣಾಮ ಮೂವರು ಮೃತಪಟ್ಟಿರುವ ದಾರುಣ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲೂಕಿನ ಜಡಿಗೇನಹಳ್ಳಿ ಬಳಿ ನಡೆದಿದೆ. 

ಒಂದೇ ಕುಟುಂಬದ ಮೂವರು ಪ್ರಾಣ ಕಳೆದುಕೊಂಡಿದ್ದು ಮೃತರನ್ನು ಹೊಸಕೋಟೆ ತಾಲೂಕಿನ ಗೊಣಕನಹಳ್ಳಿ ಗ್ರಾಮದ 38 ವರ್ಷದ ಶ್ವೇತಾ, 19 ವರ್ಷದ ಮನೋಹರ್ ಮತ್ತು 4 ವರ್ಷದ ಸುಕೃತಾ ಎಂದು ಗುರುತಿಸಲಾಗಿದೆ. 

ಮೂವರು ಬೈಕ್ ನಲ್ಲಿ ತೆರಳುತ್ತಿದ್ದಾಗ ಹಿಂಬದಿಯಿಂದ ಲಾರಿ ಡಿಕ್ಕಿ ಹೊಡೆದಿದ್ದು ಡಿಕ್ಕಿಯ ರಭಸಕ್ಕೆ ಬೈಕ್ ಹಳ್ಳಕ್ಕೆ ಬಿದ್ದು ಮೂವರು ಸ್ಥಳದಲ್ಲೇ ಪ್ರಾಣಬಿಟ್ಟಿದ್ದಾರೆ.

ಹೊಸಕೋಟೆ ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com