ಬೆಂಗಳೂರು-ಮೈಸೂರು ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ; ಶೀಘ್ರದಲ್ಲೇ ನಿತಿನ್ ಗಡ್ಕರಿ ಭೇಟಿ

ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು.
ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
ಎಕ್ಸ್ ಪ್ರೆಸ್ ವೇ ಪರಿಶೀಲಿಸಿದ ಸಿಎಂ ಸಿದ್ದರಾಮಯ್ಯ
Updated on

ಬೆಂಗಳೂರು: ಬೆಂಗಳೂರು-ಮೈಸೂರು ಎಕ್ಸ್‌ಪ್ರೆಸ್‌ವೇಯಲ್ಲಿ ಅಪಘಾತಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಖುದ್ದು ಹೆದ್ದಾರಿಯನ್ನು ಪರಿಶೀಲಿಸಿದರು.

ಮಂಡ್ಯ ಬಳಿಯ ಎಕ್ಸ್‌ಪ್ರೆಸ್‌ವೇ ಅನ್ನು ಪರಿಶೀಲಿಸಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ, ಶೀಘ್ರದಲ್ಲೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಅವರನ್ನು ಭೇಟಿ ಮಾಡಿ, ಎಕ್ಸ್‌ಪ್ರೆಸ್‌ವೇಯಲ್ಲಿನ ಕೆಲ ದೋಷಗಳು ಮತ್ತು ಬದಲಾವಣೆಗಳ ಬಗ್ಗೆ ಮಾಹಿತಿ ನೀಡುವುದಾಗಿ ಹೇಳಿದ್ದಾರೆ.

ಬಿಜೆಪಿ ಸರ್ಕಾರ, ಅಪಘಾತಗಳಿಗೆ ಕಾರಣವಾಗುತ್ತಿರುವ ನ್ಯೂನತೆಗಳನ್ನು ನಿರ್ಲಕ್ಷಿಸಿ ತರಾತುರಿಯಲ್ಲಿ ಎಕ್ಸ್‌ಪ್ರೆಸ್‌ವೇ ಉದ್ಘಾಟನೆ ಮಾಡಿದೆ ಎಂದು ಸಿಎಂ ಆರೋಪಿಸಿದರು.

"ನಾನು ದೆಹಲಿಗೆ ಹೋಗುತ್ತಿದ್ದೇನೆ ಮತ್ತು ಗಡ್ಕರಿ ಅವರನ್ನು ಭೇಟಿ ಮಾಡುತ್ತೇನೆ. ಎಕ್ಸ್‌ಪ್ರೆಸ್‌ವೇಯಲ್ಲಿನ ದೋಷಗಳನ್ನು ಸರಿಪಡಿಸುವಂತೆ ಕೇಳಿಕೊಳ್ಳುತ್ತೇನೆ ಎಂದರು.

ಸರ್ವೀಸ್ ರಸ್ತೆ ಸುಧಾರಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರಕ್ಕೆ 81 ಕೋಟಿ ರೂಪಾಯಿ ಪ್ರಸ್ತಾವನೆ ಕಳುಹಿಸಲಾಗಿದೆ. ಅದರಂತೆ ಈ ವರ್ಷ ನವೆಂಬರ್‌ನಿಂದ ಕಾಮಗಾರಿ ಆರಂಭವಾಗಲಿದೆ ಎಂದರು.

ಇನ್ನೂ ಅಪೂರ್ಣವಾಗಿರುವ ಟೋಲ್‌ಗಳಲ್ಲಿ ಟೋಲ್ ಸಂಗ್ರಹ ನಡೆಯುತ್ತಿದೆ ಎಂದುಕೇಳಲಾದ ಪ್ರಶ್ನೆಗೆ ಉತ್ತರಿಸಿದ ಸಿಎಂ, ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ(ಎನ್‌ಎಚ್‌ಎಐ) ಟೋಲ್ ವಿಧಿಸುತ್ತಿರುವುದರಿಂದ ಅದರಲ್ಲಿ ರಾಜ್ಯ ಸರ್ಕಾರಕ್ಕೆ ಪಾತ್ರ ಇಲ್ಲ ಎಂದರು.

"ನಾವು ಟೋಲ್ ಸಂಗ್ರಹಿಸುತ್ತಿಲ್ಲ ಆದರೆ ನಾನು ಅವರೊಂದಿಗೆ ಮಾತನಾಡುತ್ತೇನೆ" ಎಂದು ಮುಖ್ಯಮಂತ್ರಿ ಹೇಳಿದರು.

ಅಪಘಾತಗಳ ಕುರಿತು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರು ಎನ್‌ಎಚ್‌ಎಐ ಅಧಿಕಾರಿಗಳೊಂದಿಗೆ ಸಭೆ ನಡೆಸಿದ್ದಾರೆ ಎಂದು ಸಿಎಂ ತಿಳಿಸಿದರು.

ಎಕ್ಸ್ ಪ್ರೆಸ್ ವೇ ಸಂಚಾರಕ್ಕೆ ಮುಕ್ತವಾದ ನಂತರ ಸ್ಪೀಡ್ ಡಿಟೆಕ್ಟರ್ ಅಳವಡಿಸಿಲ್ಲ ಎಂದ ಸಿಎಂ, ಯೋಜನೆ ಅವೈಜ್ಞಾನಿಕ ಎಂದು ಕರೆಯಲು ನಿರಾಕರಿಸಿದರು. ಆದರೆ ಹೆಚ್ಚಿನ ಸುರಕ್ಷತಾ ಕ್ರಮಗಳ ಅಗತ್ಯವಿದೆ ಎಂದು ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com