ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣ: ರಾಜ್ಯದ ಎಟಿಎಸ್ ನಿಂದ ಶಂಕಿತ ಉಗ್ರರ ವಿಚಾರಣೆ

ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 
ಬಂಧಿತ ಶಂಕಿತ ಉಗ್ರರು
ಬಂಧಿತ ಶಂಕಿತ ಉಗ್ರರು
Updated on

ಬೆಳಗಾವಿ: ಕರ್ನಾಟಕ-ಮಹಾರಾಷ್ಟ್ರ ಗಡಿಯಲ್ಲಿ ಟ್ರಯಲ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ರಾಜ್ಯದ ಭಯೋತ್ಪಾದನಾ ನಿಗ್ರಹ ದಳ (ಎಟಿಎಸ್) ಶಂಕಿತ ಉಗ್ರರನ್ನು ತೀವ್ರ ವಿಚಾರಣೆಗೆ ಒಳಪಡಿಸಿದೆ. 

ಕರ್ನಾಟಕ-ಮಹಾರಾಷ್ಟ್ರದ ಗಡಿಗೆ ಹತ್ತಿರವಿರುವ ಅಂಬೀಲಿ ಅರಣ್ಯ ಪ್ರದೇಶದಲ್ಲಿ ಇಬ್ಬರು ವ್ಯಕ್ತಿಗಳು ಬಾಂಬ್ ಸ್ಫೋಟ ನಡೆಸಿದ್ದರು. ಈ ಇಬ್ಬರು ಶಂಕಿತ ಉಗ್ರರನ್ನು ಪುಣೆಯ ಕೊಥ್​ರೂಡ್ ಪೊಲೀಸರು ಬಂಧಿಸಿದ್ದರು. 

ಬಂಧನಕ್ಕೊಳಗಾಗಿರುವ ಶಂಕಿತ ಉಗ್ರರು, ಬೆಳಗಾವಿಯ ನಿಪ್ಪಾಣಿ, ಸಂಕೇಶ್ವರ ಮಾರ್ಗವಾಗಿ ಮಹಾರಾಷ್ಟ್ರದ ಅಂಬೋಲಿ ಅರಣ್ಯಕ್ಕೆ ತಲುಪಿದ್ದಾರೆ ಎಂಬ ಮಾಹಿತಿ ಲಭ್ಯವಾಗಿರುವ ಹಿನ್ನೆಲೆಯಲ್ಲಿ ಶಂಕಿತರು ಪ್ರಯಾಣಿಸಿದ್ದ ಪ್ರದೇಶಗಳಲ್ಲಿ ಎಟಿಎಸ್ ಅಧಿಕಾರಿಗಳು ಆಗಮಿಸಿ ಮಾಹಿತಿ ಸಂಗ್ರಹಿಸುತ್ತಿದ್ದಾರೆ.

ಬೈಕ್ ಕಳ್ಳತನದ ಆರೋಪದಡಿ ಮೊಹಮ್ಮದ್ ಇಮ್ರಾನ್ ಅಲಿಯಾಸ್ ಅಮಿರ್ ಅಬ್ದುಲ್​​​ ಹಮೀದ್ ಖಾನ್ ಮತ್ತು ಮೊಹಮ್ಮದ್ ಯಾಕೂಬ್ ಸಾಕಿ ಎಂಬವರನ್ನು ಬಂಧಿಸಿದಾಗ ಅವರು ನೀಡಿದ ಮಾಹಿತಿ ಆಧಾರದಲ್ಲಿ ಐಸಿಸ್ ಜೊತೆ ನಂಟು ಹೊಂದಿರುವ ಶಂಕೆ ವ್ಯಕ್ತವಾಗಿದೆ. ಈ ವೇಳೆ ಅಂಬೋಲಿ ಪ್ರದೇಶದಲ್ಲಿ ಟ್ರಯಲ್ ಬಾಂಬ್ ಬ್ಲಾಸ್ಟ್ ನಡೆಸಿದ ಮಾಹಿತಿ ಬಹಿರಂಗವಾಗಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com