525 ಕೋಟಿ ವಂಚನೆ ಪ್ರಕರಣ: ಹುಬ್ಬಳ್ಳಿ ಮೂಲದ ಇಬ್ಬರು ಉದ್ಯಮಿಗಳ 40 ಕೋಟಿ ರೂ. ಸ್ಥಿರಾಸ್ತಿ ಜಪ್ತಿ ಮಾಡಿದ ಇ.ಡಿ

525 ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 40.22 ಕೋಟಿ ಮೌಲ್ಯದ 12 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ

ಹುಬ್ಬಳ್ಳಿ: 525 ಕೋಟಿ ವಂಚನೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ(ಇಡಿ) 40.22 ಕೋಟಿ ಮೌಲ್ಯದ 12 ಸ್ಥಿರಾಸ್ತಿಗಳನ್ನು ಜಪ್ತಿ ಮಾಡಿದೆ. ಈ ಆಸ್ತಿಗಳು ಶೀತಲ್ ಕುಮಾರ್ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಅವರಿಗೆ ಸೇರಿದೆ.

ಆರೋಪಿಗಳು ರಿಯಲ್ ಎಸ್ಟೇಟ್ ವ್ಯವಹಾರದಲ್ಲಿ ಹೂಡಿಕೆ ಮಾಡುವ ನೆಪದಲ್ಲಿ ಉದ್ಯಮಿಗೆ 525 ಕೋಟಿ ರೂ. ಹಣಕಾಸು ವ್ಯವಹಾರ ನಡೆಸಿದ್ದರು. ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶದಲ್ಲಿರುವ ಒಟ್ಟು 12 ಲಗತ್ತಿಸಲಾದ ಆಸ್ತಿಗಳಲ್ಲಿ ಭೂಮಿ, ವಾಣಿಜ್ಯ ಆವರಣಗಳು, ವಿಂಡ್ ಮಿಲ್‌ಗಳು, ವಸತಿ ಅಪಾರ್ಟ್‌ಮೆಂಟ್‌ಗಳನ್ನು ಜಪ್ತಿ ಮಾಡಲಾಗಿದೆ.

ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಎಫ್‌ಐಆರ್ ಆಧಾರದ ಮೇಲೆ ಅಕ್ರಮ ಹಣ ವರ್ಗಾವಣೆ ಕಾಯ್ದೆಯಡಿ ಇಡಿ ತನಿಖೆ ಆರಂಭಿಸಿದೆ. ತನಿಖೆಯ ವೇಳೆ, ಮಾನೆರೆ ಇತರ ಆರೋಪಿಗಳೊಂದಿಗೆ ಸಂಚು ರೂಪಿಸಿ, ದೂರುದಾರ ಸಂಜಯ್ ದನ್‌ಚಂದ್ ಘೋಡಾವತ್ ಅವರೊಂದಿಗೆ ಸ್ನೇಹ ಬೆಳೆಸಿದರು. ಅಲ್ಲದೆ 525 ಕೋಟಿ ರೂಪಾಯಿಗಳನ್ನು ರಿಯಲ್ ಎಸ್ಟೇಟ್ ಯೋಜನೆಗಳಲ್ಲಿ ಹೂಡಿಕೆ ಮಾಡಲು ಪ್ರೇರೇಪಿಸಿದರು.

ಆರೋಪಿಗಳು ಹಣವನ್ನು ಬೇರೆಡೆಗೆ ತಿರುಗಿಸಿ ಮನೆರೆ, ಅವರ ಕುಟುಂಬ ಸದಸ್ಯರು ಮತ್ತು ಶೀತಲ್ ಜಿನೇಂದ್ರ ಮಗ್ದುಮ್ ಮತ್ತು ಇತರ ಕೆಲವು ವ್ಯಕ್ತಿಗಳ ವೈಯಕ್ತಿಕ ಖಾತೆಗಳಿಗೆ ವರ್ಗಾಯಿಸಿದ್ದಾರೆ ಎಂದು ಇಡಿ ತನಿಖೆಯಿಂದ ತಿಳಿದುಬಂದಿದೆ. ಪ್ರಕರಣ ಕುರಿತಂತೆ ಹೆಚ್ಚಿನ ತನಿಖೆ ನಡೆಯುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com