ಮಂಗಳೂರು ಸ್ಫೋಟದ ಮಾಸ್ಟರ್ ಮೈಂಡ್ ಲಷ್ಕರ್ ಭಯೋತ್ಪಾದಕ ಅಫ್ಸರ್ ಪಾಷಾ: ಪೊಲೀಸರ ಹೇಳಿಕೆ

ಕಳೆದ ವರ್ಷ ನವೆಂಬರ್‌ನಲ್ಲಿ ಸಂಭವಿಸಿದ ಮಂಗಳೂರು ಬಾಂಬ್ ಸ್ಫೋಟದ(Mangaluru blast) ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಅಫ್ಸರ್ ಪಾಷಾ ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.
ಮಂಗಳೂರು ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್
ಮಂಗಳೂರು ಸ್ಫೋಟದ ಆರೋಪಿ ಮೊಹಮ್ಮದ್ ಶಾರಿಕ್
Updated on

ಬೆಂಗಳೂರು: ಕಳೆದ ವರ್ಷ ನವೆಂಬರ್‌ನಲ್ಲಿ ಸಂಭವಿಸಿದ ಮಂಗಳೂರು ಬಾಂಬ್ ಸ್ಫೋಟದ(Mangaluru blast) ಮಾಸ್ಟರ್ ಮೈಂಡ್ ಲಷ್ಕರ್-ಎ-ತೈಬಾ ಸಂಘಟನೆಯ ಅಫ್ಸರ್ ಪಾಷಾ ಎಂದು ತನಿಖಾಧಿಕಾರಿಗಳು ಪತ್ತೆ ಹಚ್ಚಿದ್ದಾರೆ.

ಪ್ರಕರಣದ ಆರೋಪಿಗಳಿಗೆ ಕುಕ್ಕರ್ ಬಾಂಬ್‌ಗಳನ್ನು ತಯಾರಿಸುವ ತರಬೇತಿಯನ್ನು ಈತ ನೀಡಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ಹೇಳುತ್ತಾರೆ.

ಈ ಹಿಂದೆ ಬಾಂಗ್ಲಾದೇಶದಲ್ಲಿ ಬಾಂಬ್ ತಯಾರಿಸುವ ತರಬೇತಿ ಪಡೆದಿದ್ದ ಪಾಷಾ, ಮಂಗಳೂರು ಸ್ಫೋಟ ಪ್ರಕರಣದ ಆರೋಪಿಗಳು ಕರ್ನಾಟಕದ ಜೈಲಿನಲ್ಲಿದ್ದಾಗ ಅವರಿಗೆ ತರಬೇತಿ ನೀಡಿದ್ದನು. ಇದೀಗ ನಿಷೇಧಿತ ಸಂಘಟನೆ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಈ ಹಿಂದೆ ಪಾಷಾನ ಬ್ಯಾಂಕ್ ಖಾತೆಗೆ 5 ಲಕ್ಷ ರೂಪಾಯಿಗಳನ್ನು ವರ್ಗಾವಣೆ ಮಾಡಿರುವುದು ತನಿಖೆಯಿಂದ ಬೆಳಕಿಗೆ ಬಂದಿದ್ದು, ಪಾಷಾ ನೀಡಿದ ಮಾಹಿತಿಯ ಆಧಾರದ ಮೇಲೆ ಪೊಲೀಸರು ಸಮಗ್ರ ವರದಿಯನ್ನು ಸಿದ್ಧಪಡಿಸಿದ್ದಾರೆ. ಅದನ್ನು ಗುಪ್ತಚರ ಸಂಸ್ಥೆಗಳೊಂದಿಗೆ ಹಂಚಿಕೊಳ್ಳಲಾಗಿದೆ.

ಕೇಂದ್ರ ಸಚಿವ ನಿತಿನ್ ಗಡ್ಕರಿ ಅವರಿಗೆ ದರೋಡೆಕೋರ ಜಯೇಶ್ ಪೂಜಾರಿ ಕರೆ ಮಾಡಿದ್ದ ಬೆದರಿಕೆ ಕರೆಗಳ ತನಿಖೆಗೆ ಸಂಬಂಧಿಸಿದಂತೆ ನೆರೆಯ ಜೈಲಿನಿಂದ ಈ ತಿಂಗಳ ಆರಂಭದಲ್ಲಿ ನಗರಕ್ಕೆ ಕರೆತಂದ ನಂತರ ಪಾಷಾ ಅವರನ್ನು ಪ್ರಸ್ತುತ ನಾಗ್ಪುರ ಕೇಂದ್ರ ಕಾರಾಗೃಹದಲ್ಲಿ ಇರಿಸಲಾಗಿದೆ.

ರಾಷ್ಟ್ರೀಯ ತನಿಖಾ ದಳ ಮತ್ತು ಪೊಲೀಸರು ನಡೆಸುತ್ತಿರುವ ತನಿಖೆಯಲ್ಲಿ ಪಾಷಾ ಮಂಗಳೂರು ಬಾಂಬ್ ಸ್ಫೋಟ ಪ್ರಕರಣದ ಮಾಸ್ಟರ್ ಮೈಂಡ್ ಎಂಬುದು ಬೆಳಕಿಗೆ ಬಂದಿದೆ. ಮಂಗಳೂರು ಸ್ಫೋಟ ಪ್ರಕರಣದ ಆರೋಪಿ ಮೊಹಮ್ಮದ್ ಶಾರಿಕ್‌ಗೆ ಕುಕ್ಕರ್‌ ಬಾಂಬ್‌ ತಯಾರಿಕೆ ತರಬೇತಿ ನೀಡುವಲ್ಲಿ ಪಾಷಾ ಭಾಗಿಯಾಗಿರುವುದು ತನಿಖೆ ವೇಳೆ ಬೆಳಕಿಗೆ ಬಂದಿದೆ.

ಕಳೆದ ವರ್ಷ ನವೆಂಬರ್ 19 ರಂದು ಮಂಗಳೂರಿನಲ್ಲಿ ಆಟೋರಿಕ್ಷಾದಲ್ಲಿ ಸ್ಫೋಟ ಸಂಭವಿಸಿತ್ತು. ಕರ್ನಾಟಕದ ಶಿವಮೊಗ್ಗ ಮೂಲದ ಈ ಪ್ರಕರಣದ ಆರೋಪಿ ಶಾರಿಕ್, ಆಟೋರಿಕ್ಷಾದಲ್ಲಿ ಡಿಟೋನೇಟರ್, ವೈರ್ ಮತ್ತು ಬ್ಯಾಟರಿಗಳನ್ನು ಅಳವಡಿಸಿದ ಪ್ರೆಶರ್ ಕುಕ್ಕರ್ ಹೊಂದಿದ್ದ ಆಟೋರಿಕ್ಷಾ ಸ್ಥಗಿತಗೊಂಡಿತ್ತು.

ಪಾಷಾ ಈ ಹಿಂದೆ 2012ರಲ್ಲಿ ಜಮ್ಮು ಮತ್ತು ಕಾಶ್ಮೀರದಲ್ಲಿ ಲಷ್ಕರ್-ಎ-ತೈಬಾಗೆ ಭಯೋತ್ಪಾದಕರನ್ನು ನೇಮಿಸಿದ ಪ್ರಕರಣದಲ್ಲಿ ದೋಷಿಯಾಗಿದ್ದರು. 2005ರ ಡಿಸೆಂಬರ್‌ನಲ್ಲಿ ಬೆಂಗಳೂರಿನ ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್‌ನಲ್ಲಿ ನಡೆದ ಭಯೋತ್ಪಾದಕ ದಾಳಿಯಲ್ಲೂ ಈತ ಭಾಗಿಯಾಗಿದ್ದ ಎನ್ನಲಾಗಿದೆ.

ಬೆಂಗಳೂರು ಸ್ಫೋಟ ಪ್ರಕರಣದಲ್ಲಿ ಕರ್ನಾಟಕದ ಬೆಳಗಾವಿಯ ಹಿಂಡಲಗಾ ಜೈಲಿನಲ್ಲಿರುವ ಪಾಷಾನನ್ನು ಗಡ್ಕರಿ ಬೆದರಿಕೆ ಕರೆ ಪ್ರಕರಣದಲ್ಲಿ ಜುಲೈ 14 ರಂದು ನಾಗ್ಪುರಕ್ಕೆ ಕರೆತರಲಾಗಿತ್ತು. ಸದ್ಯ ನಾಗ್ಪುರದಲ್ಲಿ ಜೈಲಿನಲ್ಲಿದ್ದಾನೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com