ಮೈಸೂರು: ಸಹೋದರಿಯ ಸಾವಿನಿಂದ ಮನನೊಂದ ವೈದ್ಯ ಆತ್ಮಹತ್ಯೆಗೆ ಶರಣು!

ಸಹೋದರಿಯ ಅಕಾಲಿಕ ಮರಣದಿಂದ ಮನನೊಂದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on

ಮೈಸೂರು: ಸಹೋದರಿಯ ಅಕಾಲಿಕ ಮರಣದಿಂದ ಮನನೊಂದ ವೈದ್ಯರೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಂಡ್ಯ ಜಿಲ್ಲೆಯ ಕುದರಗುಂಡಿ ಗ್ರಾಮದಲ್ಲಿ ನಡೆದಿದೆ. 

ಮೃತರನ್ನು ಸಂಜೋ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಡಾ.ಕೆ.ಎಸ್ ವೇಣುಗೋಪಾಲ್ ಎಂದು ಗುರುತಿಸಲಾಗಿದೆ. ಮೈಸೂರಿನವರಾದ ಡಾ.ವೇಣುಗೋಪಾಲ್ ಅವರು ಕಳೆದ 20 ವರ್ಷಗಳಿಂದ ಸಂಜೋ ಆಸ್ಪತ್ರೆಯಲ್ಲಿ ಸೇವೆ ಸಲ್ಲಿಸುತ್ತಿದ್ದರು. ಕಳೆದ ವರ್ಷ ಅವರ ಸಹೋದರಿ ಗಾಯತ್ರಿ ಹೃದಯ ಸ್ತಂಭನದಿಂದ ನಿಧನರಾದರು. ಅಂದಿನಿಂದ ಡಾ ವೇಣುಗೋಪಾಲ್ ಖಿನ್ನತೆಗೆ ಒಳಗಾಗಿದ್ದರು ಎಂದು ಹೇಳಲಾಗಿದೆ.

ಕಳೆದ ಗುರುವಾರ ತನ್ನ ಸಹೋದರಿಯ ಮರಣ ವಾರ್ಷಿಕೋತ್ಸವವನ್ನು ನಡೆಸಿದ ವೈದ್ಯರು, ತನ್ನ ಸಹೋದರಿಯ ಸಮಾಧಿಯ ಪಕ್ಕದಲ್ಲಿ ಕುಳಿತಿದ್ದರು. ಆದರೆ ಸಂಜೆಯ ವೇಳೆಗೆ ಅವನು ಮರಕ್ಕೆ ನೇಣು ಹಾಕಿಕೊಂಡಿದ್ದಾನೆ. ದೂರಿನ ಮೇರೆಗೆ ಮದ್ದೂರು ಪೊಲೀಸರು ಪ್ರಕರಣ ದಾಖಲಿಸಿಕೊಂಡು ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮಂಡ್ಯ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ ರವಾನಿಸಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X
Google Preferred source

Advertisement

X
Kannada Prabha
www.kannadaprabha.com