ಬೆಂಗಳೂರು: ಒಡಿಶಾದ ಬಾಲಸೋರ್ ಜಿಲ್ಲೆಯಲ್ಲಿ ಸಂಭವಿಸಿದ ಭೀಕರ ರೈಲು ಅಪಘಾತದಿಂದಾಗಿ ಒಡಿಶಾದಲ್ಲಿ ಸಿಲುಕಿರುವ ರಾಜ್ಯದ ಕನ್ನಡಿಗರನ್ನು ಮರಳಿ ಕರೆತರಲು ಕಾರ್ಮಿಕ ಸಚಿವ ಸಂತೋಷ್ ಲಾಡ್ ನೇತೃತ್ವದಲ್ಲಿ ರಾಜ್ಯ ಸರ್ಕಾರ ಶನಿವಾರ ಐದು ಸದಸ್ಯರ ತಂಡವನ್ನು ಕಳುಹಿಸಿದೆ.
ಅಲ್ಲಿ ಸಿಲುಕಿರುವ 32 ವಾಲಿಬಾಲ್ ಆಟಗಾರರು ಮತ್ತು ಅವರ ಕೋಚ್ಗಾಗಿ ತಂಡವು ಕೋಲ್ಕತ್ತಾ-ಬೆಂಗಳೂರು ವಿಮಾನದಲ್ಲಿ ಟಿಕೆಟ್ ಕಾಯ್ದಿರಿಸಿದೆ ಎಂದು ಸುದ್ದಿ ಪ್ರಕಟಣೆ ತಿಳಿಸಿದೆ.
ಕೋಲ್ಕತ್ತಾದಲ್ಲಿ ನಡೆದ ವಾಲಿಬಾಲ್ ಪಂದ್ಯಾವಳಿಯಲ್ಲಿ ಪುರುಷ ಮತ್ತು ಮಹಿಳಾ ಆಟಗಾರರು ಭಾಗವಹಿಸಿದ್ದರು. ಅವರು ರೈಲಿನಲ್ಲಿ ಬೆಂಗಳೂರಿಗೆ ಹಿಂತಿರುಗುತ್ತಿದ್ದಾಗ ಒಡಿಶಾದಲ್ಲಿ ಅಪಘಾತ ಸಂಭವಿಸಿದ್ದು, ಅವರು ಸಿಲುಕಿಕೊಂಡರು.
ಕರ್ನಾಟಕ ಸರ್ಕಾರ ಇದೀಗ ಅವರನ್ನು ಬೆಂಗಳೂರಿಗೆ ವಾಪಸ್ ಕಳುಹಿಸಲು ವ್ಯವಸ್ಥೆ ಮಾಡಿದೆ. ಅದರಂತೆ ಭಾನುವಾರ ಬೆಳಗ್ಗೆ 4.15ಕ್ಕೆ ಕೋಲ್ಕತ್ತಾದಿಂದ ಇಂಡಿಗೋ ವಿಮಾನದಲ್ಲಿ ಸಂಜೆ 6.50ಕ್ಕೆ ಬೆಂಗಳೂರು ತಲುಪಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.
Advertisement