ಬಿ.ಎಸ್​ ಯಡಿಯೂರಪ್ಪಗೆ ಬಿಗ್​ ರಿಲೀಫ್: ಡಿನೋಟಿಫಿಕೇಷನ್​ ಪ್ರಕರಣ​ ರದ್ದುಪಡಿಸಿದ ಕರ್ನಾಟಕ ಹೈಕೋರ್ಟ್

ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. 
ಮಾಜಿ ಸಿಎಂ ಯಡಿಯೂರಪ್ಪ.
ಮಾಜಿ ಸಿಎಂ ಯಡಿಯೂರಪ್ಪ.
Updated on

ಬೆಂಗಳೂರು: ಮಾಜಿ ಸಿಎಂ ಬಿ.ಎಸ್​ ಯಡಿಯೂರಪ್ಪ ವಿರುದ್ಧದ ಡಿನೋಟಿಫಿಕೇಷನ್ ಪ್ರಕರಣವನ್ನು ಕರ್ನಾಟಕ ಹೈಕೋರ್ಟ್​ ರದ್ದುಪಡಿಸಿದೆ. 

ಹೈಕೋರ್ಟ್ ನ ನ್ಯಾಯಮೂರ್ತಿ ನಾಗಪ್ರಸನ್ನ ಅವರಿದ್ದ ಏಕಸದಸ್ಯ ಪೀಠವು ಪ್ರಕರಣವನ್ನು ವಜಾ ಮಾಡಿ ಆದೇಶಿಸಿದ್ದು ಈ ಮೂಲಕ ಎಂಟು ವರ್ಷದ ಹಿಂದಿನ ಪ್ರಕರಣದಿಂದ ಬಿಎಸ್​ವೈಗೆ ಬಿಗ್ ರಿಲೀಫ್ ಸಿಕ್ಕಿದೆ. ಈ ಹಿಂದೆ ಸಿಎಜಿ ವರದಿ ಆಧರಿಸಿದ 15 ಪ್ರಕರಣಗಳನ್ನು ಹೈಕೋರ್ಟ್ ರದ್ದುಪಡಿಸಿತ್ತು. ಹಿಂದಿನ ತೀರ್ಪು ಆಧರಿಸಿ 2015ರ ಡಿಸೆಬರ್ 19ರ ಕೇಸ್​ನ್ನು ಹೈಕೋರ್ಟ್ ರದ್ದುಪಡಿಸಿದೆ.

ಸಾಮಾಜಿಕ ಕಾರ್ಯಕರ್ತ ಜಯಕುಮಾರ್ ಹಿರೇಮಠ್ ಎಂಬುವರು ಬಿ.ಎಸ್​. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದ ವೇಳೆ ಹಲಗೇವಡೇರಹಳ್ಳಿ ಮತ್ತು ಬಿಳೇಕಹಳ್ಳಿಯಲ್ಲಿ ಅಕ್ರಮ ಡಿನೋಟಿಫಿಕೇಷನ್ ಮಾಡಿದ್ದಾರೆ ಎಂದು ಆರೋಪಿಸಿ 2015ರಲ್ಲಿ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬಗ್ಗೆ ಲೋಕಾಯುಕ್ತ ಸಂಸ್ಥೆಯೂ ತನಿಖೆ ನಡೆಸಿತ್ತು. 

ಪ್ರಕರಣವನ್ನು ರದ್ದು ಮಾಡುವಂತೆ ಕೋರಿ ಬಿಎಸ್​ವೈ ಹೈಕೋರ್ಟ್​ ಮೆಟ್ಟಿಲೇರಿದ್ದರು. ಸುಧೀರ್ಘ ಕಾಲ ವಿಚಾರಣೆ ನಡೆಸಿದ ನ್ಯಾಯಾಲಯವು ಪ್ರಕರಣವನ್ನು ವಜಾ ಮಾಡಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com