ಚಾಮರಾಜನಗರ: ಅಕ್ರಮವಾಗಿ ಕಾಡಿನ ಒಳಗೆ ಪ್ರವೇಶಿಸಿದ ವ್ಯಕ್ತಿಯನ್ನು ಕಾಡಾನೆ ಅಟ್ಟಾಡಿಸಿಕೊಂಡು ಬರುವ ದೃಶ್ಯ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಬಂಡೀಪುರ ಅರಣ್ಯ ಪ್ರದೇಶಕ್ಕೆ ಹೊಂದಿಕೊಂಡಿರುವ ಕೇರಳದ ಮುತ್ತಂಗ ವನ್ಯಜೀವಿಧಾಮದಲ್ಲಿ ಈ ಘಟನೆ ನಡೆದಿದೆ.
ಪ್ರವಾಸಿಗರೊಬ್ಬರು ಕ್ಯಾಮರಾ ಹಿಡಿದುಕೊಂಡು ಆನೆಯ ಫೋಟೋ ವಿಡಿಯೊ ತೆಗೆಯಲೆಂದು ಕಾಡಿನೊಳಗೆ ಪ್ರವೇಶಿಸಿದ್ದಾರೆ. ಆಗ ಕಾಡಾನೆ ಸಿಟ್ಟಿನಿಂದ ಅಟ್ಟಿಸಿಕೊಂಡು ಬಂದಿದ್ದು ಪ್ರವಾಸಿಗ ಕೂದಲೆಳೆ ಅಂತರದಲ್ಲಿ ಬಚಾವಾಗಿದ್ದಾರೆ.
ಅರಣ್ಯ ಇಲಾಖೆ ಈ ಘಟನೆ ಬಗ್ಗೆ ತನಿಖೆಗೆ ಆದೇಶ ನೀಡಿದೆ.
Advertisement